ಭದ್ರಾವತಿ, ಆ. ೨೩: ಜಾತ್ಯತೀತ ಜನತಾದಳ ವಿಧಾನಸಭಾ ಕ್ಷೇತ್ರದ ನೂತನ ಪದಾಧಿಕಾರಿಗಳನ್ನು ಪಕ್ಷದ ವರಿಷ್ಠರ ಆದೇಶದ ಮೇರೆಗೆ ಪಕ್ಷದ ಮುಖಂಡರಾದ ಶಾರದ ಎಂ.ಜೆ ಅಪ್ಪಾಜಿ ನೇಮಕಗೊಳಿಸಿ ಪಟ್ಟಿ ಬಿಡುಗಡೆಗೊಳಿಸಿದ್ದಾರೆ.
ಜಿಲ್ಲಾ ಯುವ ಘಟಕದ ಅಧ್ಯಕ್ಷರಾಗಿ ಮಧುಕುಮಾರ್, ತಾಲೂಕು ನಗರ ಘಟಕದ ಅಧ್ಯಕ್ಷರಾಗಿ ಆರ್. ಕರುಣಾಮೂರ್ತಿ, ಗ್ರಾಮಂತರ ಘಟಕದ ಅಧ್ಯಕ್ಷರಾಗಿ ಕೆ. ಧರ್ಮಕುಮಾರ, ನಗರ ಘಟಕದ ಮಹಿಳಾ ಅಧ್ಯಕ್ಷರಾಗಿ ವಿಶಾಲಾಕ್ಷಿ, ಗ್ರಾಮಾಂತರ ಘಟಕದ ಅಧ್ಯಕ್ಷರಾಗಿ ಪಾರ್ವತಿಬಾಯಿ, ಅಲ್ಪ ಸಂಖ್ಯಾಂತರ ನಗರ ಘಟಕದ ಅಧ್ಯಕ್ಷರಾಗಿ ಮುತುರ್ಜಾಖಾನ್, ತಾಲೂಕು ಯುವ ಘಟಕದ ಅಧ್ಯಕ್ಷರಾಗಿ ಎಂ.ಎ ಅಜಿತ್, ನಗರ ಘಟಕದ ಕಾರ್ಯಾಧ್ಯಕ್ಷರಾಗಿ ಬಿ.ಸಿ ಉಮೇಶ್, ಪರಿಶಿಷ್ಟ ಜಾತಿ ನಗರ ಘಟಕದ ಅಧ್ಯಕ್ಷರಾಗಿ ಮೈಲಾರಪ್ಪ, ಪರಿಶಿಷ್ಟ ಜಾತಿ ಗ್ರಾಮಾಂತರ ಘಟಕದ ಅಧ್ಯಕ್ಷರಾಗಿ ಶ್ರೀಧರನಾಯ್ಕ, ಪಕ್ಷದ ಪ್ರಧಾನ ಕಾರ್ಯದರ್ಶಿ ಹಾಗು ವಕ್ತಾರರಾಗಿ ಎಂ. ರಾಜು ಮತ್ತು ನಗರ ಘಟಕದ ಮಹಿಳಾ ಕಾರ್ಯದರ್ಶಿಯಾಗಿ ಭಾಗ್ಯಮ್ಮ ಅವರನ್ನು ನೇಮಕಗೊಳಿಸಿ ಪಕ್ಷದ ತತ್ವ ಸಿದ್ದಾಂತಗಳಿಗೆ ಅನುಗುಣವಾಗಿ ಜವಾಬ್ದಾರಿ ನಿರ್ವಹಿಸುವಂತೆ ಶಾರದ ಎಂ.ಜೆ ಅಪ್ಪಾಜಿ ಸೂಚಿಸಿದ್ದಾರೆ.
No comments:
Post a Comment