Monday, August 22, 2022

ಗಣೇಶೋತ್ಸವ ಆಚರಣೆ : ಆ.೨೪ರಂದು ಸಭೆ

ಭದ್ರಾವತಿ, ಆ. ೨೨ : ನಗರಸಭೆ ವ್ಯಾಪ್ತಿಯ ಸಾರ್ವಜನಿಕ ಸ್ಥಳಗಳಲ್ಲಿ ವಿನಾಯಕ ಮೂರ್ತಿಗಳನ್ನು ಪ್ರತಿಷ್ಠಾಪಿಸುವವರು ಅನುಸರಿಸಬೇಕಾದ ಕ್ರಮಗಳ ಕುರಿತು ಚರ್ಚಿಸಲು ಆ.೨೪ರಂದು ಬೆಳಿಗ್ಗೆ ೧೧ ಗಂಟೆಗೆ ನಗರಸಭೆ ಸಭಾಂಗಣದಲ್ಲಿ ಸಭೆ ಕರೆಯಲಾಗಿದೆ.
    ಈ ಬಾರಿ ಎಲ್ಲೆಡೆ ಗಣೇಶೋತ್ಸವ ಅದ್ದೂರಿಯಾಗಿ ಆಚರಿಸಲು ಸಿದ್ದತೆಗಳು ನಡೆಯುತ್ತಿದ್ದು, ಇದಕ್ಕೆ ಪೂರಕವಾಗಿ ಗಣೇಶೋತ್ಸವ ಆಚರಿಸುವ ಸಮಿತಿಯವರು ಸಾರ್ವಜನಿಕರಿಗೆ ಯಾವುದೇ ರೀತಿ ತೊಂದರೆಯಾಗದಂತೆ ಅನುಸರಿಸಬೇಕಾದ ಕ್ರಮಗಳ ಕುರಿತು ನಗರಸಭೆ ಅಧ್ಯಕ್ಷೆ ಗೀತಾ ರಾಜಕುಮಾರ್ ಅಧ್ಯಕ್ಷತೆಯಲ್ಲಿ ಚರ್ಚಿಸಲಾಗುವುದು. ಈ ಹಿನ್ನಲೆಯಲ್ಲಿ ಸಭೆಯಲ್ಲಿ ಪಾಲ್ಗೊಂಡು ಸಲಹೆ, ಸೂಚನೆಗಳನ್ನು ನೀಡುವಂತೆ ಪೌರಾಯುಕ್ತ ಮನುಕುಮಾರ್ ಕೋರಿದ್ದಾರೆ.

No comments:

Post a Comment