ಭದ್ರಾವತಿ, ಸೆ. ೨೯: ನವರಾತ್ರಿ ಮಹೋತ್ಸವ ಅಂಗವಾಗಿ ಸಮಸ್ತ ನಾಗರೀಕರ ಕಲ್ಯಾಣಾಭಿವೃದ್ಧಿಗಾಗಿ ಶ್ರೀ ವಿನಯ್ ಗುರೂಜಿ ಭಕ್ತ ವೃಂದದಿಂದ ಸೆ.೩೦ರಂದು ದುರ್ಗಾ ಸಪ್ತಪತಿ ಪಾರಾಯಣ ಹಮ್ಮಿಕೊಳ್ಳಲಾಗಿದೆ.
ಶ್ರೀ ವಿನಯ್ ಗುರೂಜಿ ನೇತೃತ್ವದಲ್ಲಿ ಸಿದ್ದಾರೂಢ ನಗರದ ಶ್ರೀ ಬಸವೇಶ್ವರ ಸಭಾಭವನದಲ್ಲಿ ಬೆಳಿಗ್ಗೆ ೧೧ ಗಂಟೆಗೆ ದುರ್ಗಾ ಸಪ್ತಪತಿ ಪಾರಾಯಣ ನಡೆಯಲಿದ್ದು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಕೋರಲಾಗಿದೆ.
No comments:
Post a Comment