ಎ.ಕೆ ನಾಗೇಂದ್ರಪ್ಪ
ಭದ್ರಾವತಿ, ಸೆ. ೧೪: ತಾಲೂಕಿನ ಕಲ್ಲಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸಿರಿಯೂರು ಗ್ರಾಮ ಸರ್ಕಾರಿ ಶಾಲೆಯೊಂದರ ಗೋಡೆ ಕುಸಿದ ಸ್ಥಳಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಈ ಕುರಿತು ಪತ್ರಿಕೆಗೆ ಮಾಹಿತಿ ನೀಡಿ, ಶಾಲೆಯ ಗೋಡೆ ಕುಸಿದಿರುವುದು ಗಮನಕ್ಕೆ ಬಂದ ಹಿನ್ನಲೆಯಲ್ಲಿ ಪರಿಶೀಲನೆ ನಡೆಸಲಾಗಿದೆ. ಈಗಾಗಲೇ ಶಾಸಕರು ಸರ್ಕಾರಕ್ಕೆ ಒಂದು ಕೊಠಡಿಗೆ ಪ್ರಸ್ತಾವನೆ ಸಲ್ಲಿಸಿದ್ದರು. ಇದು ಮಂಜೂರಾತಿಯಾಗಿದ್ದು, ಶೀಘ್ರದಲ್ಲಿಯೇ ಕಾಮಗಾರಿ ನಡೆಯಲಿದೆ. ಉಳಿದಂತೆ ಇನ್ನೂ ಎರಡು ಕೊಠಡಿಗಳಿಗೆ ಪ್ರಸ್ತಾವನೆ ಸಲ್ಲಿಸಲಾಗುವುದು. ಪೋಷಕರು, ವಿದ್ಯಾರ್ಥಿಗಳು ಈ ಸರ್ಕಾರಿ ಶಾಲೆ ಬಗ್ಗೆ ಆತಂಕಪಡದಿರುವಂತೆ ಮನವಿ ಮಾಡಿದ್ದಾರೆ.
No comments:
Post a Comment