ಪಿತೃಪಕ್ಷ ಕೊನೆಯ ದಿನವಾದ ಮಹಾಲಯ ಅಮಾವಾಸ್ಯೆ ಹಿನ್ನಲೆಯಲ್ಲಿ ಭದ್ರಾವತಿ ಹಳೇ ಸೇತುವೆ ಸಮೀಪದ ಶ್ರೀ ಸಂಗಮೇಶ್ವರ ಸ್ವಾಮಿ ದೇವಸ್ಥಾನದ ಬಳಿ ಹಿರಿಯರಿಗೆ ಪಿಂಡ ಸಮರ್ಪಣೆ ನಡೆಸಲಾಯಿತು.
ಭದ್ರಾವತಿ, ಸೆ. ೨೫: ಪಿತೃಪಕ್ಷ ಕೊನೆಯ ದಿನವಾದ ಮಹಾಲಯ ಅಮಾವಾಸ್ಯೆ ಹಿನ್ನಲೆಯಲ್ಲಿ ಹಳೇ ಸೇತುವೆ ಸಮೀಪದ ಶ್ರೀ ಸಂಗಮೇಶ್ವರ ಸ್ವಾಮಿ ದೇವಸ್ಥಾನದ ಬಳಿ ಹಿರಿಯರಿಗೆ ಪಿಂಡ ಸಮರ್ಪಣೆ ನಡೆಸಲಾಯಿತು.
ಪ್ರತಿ ವರ್ಷದಂತೆ ಈ ಬಾರಿ ಸಹ ಶ್ರೀ ರಾಮೇಶ್ವರ ದೇವಸ್ಥಾನದ ಆವರಣದಲ್ಲಿ ಪುರೋಹಿತರಿಂದ ಧಾರ್ಮಿಕ ಆಚರಣೆಗಳು ಜರುಗಿದವು. ನಗರದ ವಿವಿಧೆಡೆಗಳಿಂದ ಆಗಮಿಸಿದ್ದ ನೂರಾರು ಮಂದಿ ಧಾರ್ಮಿಕ ಆಚರಣೆಗಳ ಮೂಲಕ ಹಿರಿಯರನ್ನು ಸ್ಮರಿಸಿ ಅವರ ಆತ್ಮಕ್ಕೆ ಶಾಂತಿ ಬಯಸುವ ಮೂಲಕ ಆಶೀರ್ವಾದ ಕೋರಿದರು. ಕೊನೆಯಲ್ಲಿ ಭದ್ರಾ ನದಿಯಲ್ಲಿ ಪಿಂಡ ಸಮರ್ಪಣೆ ನೆರವೇರಿಸಿದರು.
ಪಿತೃಪಕ್ಷ ಕೊನೆಯ ದಿನವಾದ ಮಹಾಲಯ ಅಮಾವಾಸ್ಯೆ ಹಿನ್ನಲೆಯಲ್ಲಿ ಭದ್ರಾವತಿ ಶ್ರೀ ರಾಮೇಶ್ವರ ದೇವಸ್ಥಾನದ ಆವರಣದಲ್ಲಿ ಪುರೋಹಿತರಿಂದ ಧಾರ್ಮಿಕ ಆಚರಣೆಗಳು ಜರುಗಿದವು.
No comments:
Post a Comment