Tuesday, September 13, 2022

ಅಡಕೆ ಕೊಯ್ಯುವಾಗ ವಿದ್ಯುತ್ ತಗುಲಿ ವ್ಯಕ್ತಿ ಮೃತ

    ಭದ್ರಾವತಿ, ಸೆ. ೧೩: ತೋಟದಲ್ಲಿ ಅಡಕೆ ಕೊಯ್ಯುವಾಗ ವಿದ್ಯುತ್ ತಗುಲಿದ ಪರಿಣಾಮ ಓರ್ವ ವ್ಯಕ್ತಿ ಮೃತಪಟ್ಟಿರುವ ಘಟನೆ ತಾಲೂಕಿನ ಕಾಚಗೊಂಡನಹಳ್ಳಿ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ.
    ಗ್ರಾಮದ ನಿವಾಸಿ ಮಂಜುನಾಥ ಬರ್ಗೆ(೩೮) ಮೃತಪಟ್ಟಿದ್ದು, ಅಡಕೆ ಕೊಯ್ಯುವಾಗ ಅಕಸ್ಮಿಕವಾಗಿ ವಿದ್ಯುತ್ ಕಂಬದಲ್ಲಿನ ತಂತಿಗೆ ತಗುಲಿದೆ. ಇದರಿಂದಾಗಿ ವಿದ್ಯುತ್ ಪ್ರವಹಿಸಿ ತೀವ್ರ ಅಸ್ವಸ್ಥಗೊಂಡಿದ್ದು, ತಕ್ಷಣ ಆಸ್ಪತ್ರೆಗೆ ಸಾಗಿಸುವಷ್ಟರಲ್ಲಿ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಮಂಜುನಾಥ ಬರ್ಗೆ ಗ್ರಾಮದ ಶ್ರೀನಿವಾಸ್ ಬರ್ಗೆ ಅವರ ಪುತ್ರರಾಗಿದ್ದು, ಪತ್ನಿ, ಇಬ್ಬರು ಮಕ್ಕಳಿದ್ದಾರೆ.

No comments:

Post a Comment