ಭದ್ರಾವತಿ, ಸೆ. ೧೩: ಗಣಪತಿ ವಿಸರ್ಜಣೆ ವೇಳೆ ಇಬ್ಬರು ಯುವಕರ ನಡುವೆ ಹಳೇ ವೈಯಕ್ತಿಕ ದ್ವೇಷದ ಹಿನ್ನಲೆಯಲ್ಲಿ ಕಳೆದ ೨ ದಿನಗಳ ಹಿಂದೆ ಜಗಳ ನಡೆದಿದ್ದು, ಈ ನಡುವೆ ಓರ್ವನಿಗೆ ಚಾಕುವಿನಿಂದ ಇರಿಯಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಓರ್ವನನ್ನು ಬಂಧಿಸಿದ್ದಾರೆ.
ನಗರದ ಹೊರವಲಯದ ಬೈಪಾಸ್ ರಸ್ತೆ ಸಮೀಪದಲ್ಲಿರುವ ಶಿವರಾಮ ನಗರದಲ್ಲಿ ಗಣಪತಿ ವಿಸರ್ಜನೆ ವೇಳೆ ರಾತ್ರಿ ಮಂಜುನಾಥ್ ಮತ್ತು ಮನು ಎಂಬ ಇಬ್ಬರು ಯುವಕರ ನಡುವೆ ಹಳೇ ವೈಯಕ್ತಿಕ ದ್ವೇಷದ ಹಿನ್ನಲೆಯಲ್ಲಿ ಜಗಳ ನಡೆದಿದ್ದು, ಇಬ್ಬರ ನಡುವಿನ ಜಗಳ ವಿಕೋಪಕ್ಕೆ ತಿರುಗಿ ಮಂಜುನಾಥ್ಗೆ ಮನು ಅಲಿಯಾಸ್ ಮನೋಜ್ ಚಾಕುವಿನಿಂದ ಇರಿದು ಪರಾರಿಯಾಗಿದ್ದನು ಎನ್ನಲಾಗಿದೆ. ಈ ಸಂಬಂಧ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
No comments:
Post a Comment