ಭದ್ರಾವತಿಯಲ್ಲಿ ಪೊಲೀಸ್ ಇಲಾಖೆಗೆ ಸಿ.ಸಿ ಕ್ಯಾಮೆರಾ ಮೂಲಕ ನಗರದ ಪ್ರಮುಖ ವೃತ್ತಗಳ ವೀಕ್ಷಣೆಗೆ ಅನುಕೂಲವಾಗುವಂತೆ ಶಾಸಕ ಬಿ.ಕೆ ಸಂಗಮೇಶ್ವರ್ ಟಿ.ವಿ ಕೊಡುಗೆಯಾಗಿ ನೀಡಿದ್ದಾರೆ.
ಭದ್ರಾವತಿ, ಸೆ. ೭: ಪೊಲೀಸ್ ಇಲಾಖೆಗೆ ಸಿ.ಸಿ ಕ್ಯಾಮೆರಾ ಮೂಲಕ ನಗರದ ಪ್ರಮುಖ ವೃತ್ತಗಳ ವೀಕ್ಷಣೆಗೆ ಅನುಕೂಲವಾಗುವಂತೆ ಶಾಸಕ ಬಿ.ಕೆ ಸಂಗಮೇಶ್ವರ್ ಟಿ.ವಿ ಕೊಡುಗೆಯಾಗಿ ನೀಡಿದ್ದಾರೆ.
ಪೊಲೀಸ್ ನಗರ ವೃತ್ತ ನಿರೀಕ್ಷಕರ ಕಛೇರಿಗೆ ಟಿ.ವಿ ಅಗತ್ಯತೆ ಮನಗಂಡು ಕೊಡುಗೆಯಾಗಿ ನೀಡಲಾಗಿದ್ದು, ಪೊಲೀಸ್ ಉಪಾಧೀಕ್ಷಕ ಜಿತೇಂದ್ರಕುಮಾರ್ ದಯಾಮ, ನಗರ ವೃತ್ತ ನಿರೀಕ್ಷಕ ರಾಘವೇಂದ್ರ ಕಾಂಡಿಕೆ ಹಾಗು ಸಿಬ್ಬಂದಿಗಳು ಟಿ.ವಿ ಸ್ವೀಕರಿಸಿದರು.
ಶಾಸಕ ಬಿ.ಕೆ ಸಂಗಮೇಶ್ವರ್ ಪುತ್ರ ಬಿ.ಎಸ್ ಬಸವೇಶ್, ನಗರಸಭಾ ಸದಸ್ಯ ಆರ್. ಶ್ರೇಯಸ್(ಚಿಟ್ಟೆ) ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment