Friday, September 9, 2022

ನಿವೃತ್ತ ಶಿಕ್ಷಕಿ ಎನ್. ಶ್ಯಾಮಲ ನಿಧನ

ಎನ್. ಶ್ಯಾಮಲ
    ಭದ್ರಾವತಿ, ಸೆ. ೯: ನಿವೃತ್ತ ಶಿಕ್ಷಕಿ ಎನ್. ಶ್ಯಾಮಲ(೭೯) ನಿಧನ ಹೊಂದಿದ್ದು, ಶುಕ್ರವಾರ ಸಂಜೆ ಇವರ ಅಂತ್ಯಕ್ರಿಯೆ ನಡೆಯಿತು.
    ಪತಿ ಹಾಗು ನಾಲ್ವರು ಪುತ್ರಿಯರನ್ನು ಹೊಂದಿದ್ದರು. ಶ್ಯಾಮಲ ಅವರು ತಾಲೂಕಿನ ವಿವಿಧೆಡೆ ಸರ್ಕಾರಿ ಶಾಲೆಗಳಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ್ದರು.
    ಇವರ ನಿಧನಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್, ತಾಲೂಕು ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಎಂ.ಎಸ್ ಜನಾರ್ಧನ ಅಯ್ಯಂಗಾರ್, ಬಿಜೆಪಿ ತಾಲೂಕು ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಮಂಗೋಟೆ ರುದ್ರೇಶ್, ಜಿ. ಆನಂದ್‌ಕುಮಾರ್ ಸೇರಿದಂತೆ ಇನ್ನಿತರ ಗಣ್ಯರು ಸಂತಾಪ ಸೂಚಿಸಿದ್ದಾರೆ.

No comments:

Post a Comment