Friday, September 2, 2022

ಚಿರತೆ ಸೆರೆ ಹಿಡಿದು ಆತಂಕ ದೂರ ಮಾಡಿ, ಸೂಕ್ತ ಪರಿಹಾರ ನೀಡಿ : ವಲಯ ಅರಣ್ಯಾಧಿಕಾರಿಗೆ ಮನವಿ

ಭದ್ರಾವತಿ ತಾಲೂಕಿನ ಅರಹತೊಳಲು, ಕೈಮರ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಅಲ್ಲದೆ ಒಂದು ಹಸು ಚಿರತೆಗೆ ಬಲಿಯಾಗಿದೆ. ಇದರಿಂದಾಗಿ ಗ್ರಾಮಸ್ಥರು ಭಯಭೀತರಾಗಿದ್ದಾರೆ. ತಕ್ಷಣ ಚಿರತೆಯನ್ನು ಸೆರೆ ಹಿಡಿದು ರೈತರ ಆತಂಕ ದೂರ ಮಾಡುವಂತೆ ಶಾಂತಿ ಸಾಗರ, ಮಾವಿನಕಟ್ಟೆ ವಲಯ ಅರಣ್ಯಾಧಿಕಾರಿಗಳಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ವತಿಯಿಂದ ಶುಕ್ರವಾರ ಮನವಿ ಸಲ್ಲಿಸಿ ಒತ್ತಾಯಿಸಲಾಗಿದೆ.
    ಭದ್ರಾವತಿ, ಸೆ. ೨: ತಾಲೂಕಿನ ಅರಹತೊಳಲು, ಕೈಮರ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಚಿರತೆ ಕಾಣಿಸಿಕೊಂಡಿದ್ದು, ಅಲ್ಲದೆ ಒಂದು ಹಸು ಚಿರತೆಗೆ ಬಲಿಯಾಗಿದೆ. ಇದರಿಂದಾಗಿ ಗ್ರಾಮಸ್ಥರು ಭಯಭೀತರಾಗಿದ್ದಾರೆ. ತಕ್ಷಣ ಚಿರತೆಯನ್ನು ಸೆರೆ ಹಿಡಿದು ರೈತರ ಆತಂಕ ದೂರ ಮಾಡುವಂತೆ ಶಾಂತಿ ಸಾಗರ, ಮಾವಿನಕಟ್ಟೆ ವಲಯ ಅರಣ್ಯಾಧಿಕಾರಿಗಳಿಗೆ ಕರ್ನಾಟಕ ರಾಜ್ಯ ರೈತ ಸಂಘ ಹಾಗು ಹಸಿರು ಸೇನೆ ವತಿಯಿಂದ ಶುಕ್ರವಾರ ಮನವಿ ಸಲ್ಲಿಸಿ ಒತ್ತಾಯಿಸಲಾಗಿದೆ.
    ಚಿರತೆ ಕಾಣಿಸಿಕೊಂಡಿರುವ ಹಿನ್ನಲೆಯಲ್ಲಿ ಗ್ರಾಮಸ್ಥರು ಆತಂಕಕ್ಕೆ ಒಳಗಾಗಿದ್ದಾರೆ. ಈ ನಡುವೆ ಬೊಮ್ಮನಕಟ್ಟೆ ಗ್ರಾಮದ ಮಂಜಪ್ಪ ಎಂಬ ರೈತನಿಗೆ ಸೇರಿದ ಹಸು ಚಿರತೆಗೆ ಬಲಿಯಾಗಿದ್ದು, ಇದರಿಂದಾಗಿ ಮತ್ತಷ್ಟು ಆತಂಕ ಹೆಚ್ಚಾಗಿದೆ. ಗ್ರಾಮಸ್ಥರು ಮನೆಗಳಿಂದ ಹೊರಬರುತ್ತಿಲ್ಲ. ರೈತರು ಹೊಲ-ಗದ್ದೆ, ತೋಟಗಳಿಗೆ ಹೋಗಲು ಭಯಭೀತರಾಗಿದ್ದಾರೆ. ಈ ಹಿನ್ನಲೆಯಲ್ಲಿ ತಕ್ಷಣ ಚಿರತೆಯನ್ನು ಸೆರೆ ಹಿಡಿದು ಆತಂಕ ದೂರ ಮಾಡುವಂತೆ ಹಾಗು ಹಸು ಕಳೆದುಕೊಂಡಿರುವ ರೈತನಿಗೆ ಸೂಕ್ತ ಪರಿಹಾರ ನೀಡುವಂತೆ ಕೋರಲಾಗಿದೆ.
    ರೈತ ಸಂಘದ ತಾಲೂಕು ಅಧ್ಯಕ್ಷ ಹಿರಿಯಣ್ಣಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ವಿ ವೀರೇಶ್, ಶರಶ್ಚಂದ್ರ, ಮಂಜುನಾಥ್, ತಿಮ್ಮಣ್ಣ, ಗೋವಿಂದಪ್ಪ, ಗಂಗಮ್ಮ, ಕರಿಬಸಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment