Wednesday, September 7, 2022

ಮುರುಘಾ ಶ್ರೀಗಳ ಮೇಲಿನ ಪ್ರಕರಣ ನಿಷ್ಪಕ್ಷಪಾತ ತನಿಖೆ ನಡೆಯಲಿ, ಸಂತ್ರಸ್ಥ ಅಪ್ರಾಪ್ತ ಬಾಲಕಿಯರಿಗೆ ಭದ್ರೆತೆ, ನ್ಯಾಯ ಒದಗಿಸಿ

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟದ ವತಿಯಿಂದ ಪ್ರತಿಭಟನೆ ನಡೆಸಿ ಮನವಿ ಸಲ್ಲಿಕೆ

ಚಿತ್ರದುರ್ಗ ಮುರುಘಾ ಮಠದ ಶ್ರೀಗಳ ಮೇಲಿನ ಪ್ರಕರಣದ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕು. ಸಂತ್ರಸ್ಥ ಅಪ್ರಾಪ್ತ ಬಾಲಕಿಯರಿಗೆ ನ್ಯಾಯ ಒದಗಿಸಿಕೊಡುವ ಜೊತೆಗೆ ಬಿಗಿ ಭದ್ರತೆ ನೀಡಬೇಕೆಂದು ಆಗ್ರಹಿಸಿ ಬುಧವಾರ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟದ ವತಿಯಿಂದ ಭದ್ರಾವತಿ ತಾಲೂಕು ಕಛೇರಿ ಮಿನಿವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಆರ್. ಪ್ರದೀಪ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
    ಭದ್ರಾವತಿ, ಸೆ. ೭: ಚಿತ್ರದುರ್ಗ ಮುರುಘಾ ಮಠದ ಶ್ರೀಗಳ ಮೇಲಿನ ಪ್ರಕರಣದ ತನಿಖೆ ನಿಷ್ಪಕ್ಷಪಾತವಾಗಿ ನಡೆಯಬೇಕು. ಸಂತ್ರಸ್ಥ ಅಪ್ರಾಪ್ತ ಬಾಲಕಿಯರಿಗೆ ನ್ಯಾಯ ಒದಗಿಸಿಕೊಡುವ ಜೊತೆಗೆ ಬಿಗಿ ಭದ್ರತೆ ನೀಡಬೇಕೆಂದು ಆಗ್ರಹಿಸಿ ಬುಧವಾರ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಒಕ್ಕೂಟದ ವತಿಯಿಂದ ತಾಲೂಕು ಕಛೇರಿ ಮಿನಿವಿಧಾನಸೌಧದ ಮುಂಭಾಗ ಪ್ರತಿಭಟನೆ ನಡೆಸಿ ತಹಸೀಲ್ದಾರ್ ಆರ್. ಪ್ರದೀಪ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
    ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ರಾಜ್ಯ ಖಜಾಂಚಿ ಸತ್ಯ ಭದ್ರಾವತಿ ಹಾಗು ಒಕ್ಕೂಟದ ರಾಜ್ಯಾಧ್ಯಕ್ಷ ವಿ. ವಿನೋದ್ ಸೇರಿದಂತೆ  ಪ್ರಮುಖರು ಮಾತನಾಡಿ, ಶ್ರೀಗಳು ಅಪ್ರಾಪ್ತ ಬಾಲಕಿಯರ ಮೇಲಿನ ಲೈಂಗಿಕ ದೌರ್ಜನ್ಯದ ಆರೋಪ ಎದುರಿಸುತ್ತಿದ್ದು, ಕಾನೂನು ಪ್ರಕಾರ ಎಲ್ಲರೂ ಒಂದೇ ಆಗಿದ್ದಾರೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣಾ ಕಾಯ್ದೆ(ಪೋಕ್ಸೋ)ಯಡಿ ಪ್ರಕರಣ ದಾಖಲಾದ ೨೪ ಗಂಟೆಯೊಳಗೆ ಆರೋಪ ಎದುರಿಸುತ್ತಿರುವವರನ್ನು ಬಂಧಿಸಬೇಕು. ಆದರೆ ಶ್ರೀಗಳನ್ನು ವಿಳಂಬವಾಗಿ ಬಂಧಿಸಲಾಗಿದೆ. ಆರೋಪ ಎದುರಿಸುವ ಸಾಮಾನ್ಯ ಜನರಿಗೆ ಒಂದು ರೀತಿ ಕಾನೂನು, ಶ್ರೀಗಳಿಗೆ ಒಂದು ರೀತಿ ಕಾನೂನು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.
    ಶ್ರೀಗಳು ತಮ್ಮ ಮೇಲೆ ಬಂದಿರುವ ಆರೋಪವನ್ನು ಏಸು, ಬುದ್ಧ, ಸೆಕ್ರಿಟಿಸ್ ಮತ್ತು ಬಸವಣ್ಣನವರ ಮೇಲೆ ಬಂದ ಆರೋಪಗಳೊಂದಿಗೆ ಹೋಲಿಕೆ ಮಾಡಿಕೊಳ್ಳುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಶ್ರೀಗಳು ಮಹಾನ್ ವ್ಯಕ್ತಿಯಾಗಿ ಬಿಂಬಿಸಿಕೊಳ್ಳಲು ಯತ್ನಿಸುವ ಮೂಲಕ ಜನಸಾಮಾನ್ಯರ ದಿಕ್ಕು ತಪ್ಪಿಸುತ್ತಿದ್ದಾರೆಂದು ಆರೋಪಿಸಿದರು.
    ಏಸು, ಬುದ್ಧ, ಸೆಕ್ರಿಟಿಸ್ ಮತ್ತು ಬಸವಣ್ಣನವರಂತಹ ಮಹಾಪುರುಷರೇ ಅವರ ಮೇಲೆ ಆರೋಪಗಳು ಬಂದಾಗ ಅವರು ನಿಷ್ಪಕ್ಷವಾಗಿ ಸ್ವಯಂ ತಾವುಗಳೇ ತನಿಖೆಗೆ ಒಳಪಡಲು ಸಿದ್ದರಾಗಿ ನಂತರ ಅವರ ಮೇಲಿನ ಎಲ್ಲಾ ಆರೋಪಗಳಿಂದ ಮುಕ್ತರಾಗಿ ಹೊರ ಬಂದಿರುತ್ತಾರೆ. ಇದೆ ರೀತಿ ಶ್ರೀಗಳು ಸಹ ಸ್ವಯಂ ತನಿಖೆಗೆ ಒಳಪಟ್ಟು ನಿರಪರಾಧಿ ಎಂದು ಸಾಬೀತು ಮಾಡಬೇಕು. ಅಲ್ಲಿಯ ವರೆಗೂ ಮಠದ ಅಧಿಕಾರದಿಂದ ದೂರವಿರಬೇಕೆಂದು ಆಗ್ರಹಿಸಿದರು.
    ಮುಖ್ಯಮಂತ್ರಿಗಳು ಶ್ರೀಗಳ ಮೇಲಿನ ಪ್ರಕರಣ ನಿಷ್ಪಕ್ಷವಾಗಿ ತನಿಖೆ ನಡೆಯುವಂತೆ ನೋಡಿಕೊಳ್ಳಬೇಕು. ಸಂತ್ರಸ್ಥ ಅಪ್ರಾಪ್ತ ಬಾಲಕಿಯರಿಗೆ ನ್ಯಾಯ ಒದಗಿಸಿಕೊಡುವ ಜೊತೆಗೆ ಬಿಗಿ ಭದ್ರತೆ ನೀಡಬೇಕೆಂದು ಆಗ್ರಹಿಸಿದರು.
    ಒಕ್ಕೂಟದ ಪ್ರಮುಖರಾದ ಎಸ್. ವೆಂಕಟೇಶ್, ವಿ. ಅರವಿಂದ್, ಸಂಧ್ಯಾ, ಕುಮಾರ್, ರಾಮು, ಸುಶೀಲಮ್ಮ, ಎಚ್. ನಿಂಗರಾಜ್, ಮಹೇಶ್ವರಿ, ಬಸವರಾಜ್, ಭಾನುಪ್ರಿಯ, ಎನ್. ವೆಂಕಟೇಶ್, ಚಲುವರಾಜ್, ಅರುಳ್, ಕೆ. ರಾಜು, ಗೀತಾ, ಎಸ್. ಕುಮಾರ್, ಸುಬ್ರಮಣಿ, ಸುಧಾಕರ್, ನಾಗರಾಜ್ ಮತ್ತು ಬಾಷಾ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment