ಭದ್ರಾವತಿ ನಗರದ ಜನ್ನಾಪುರ ಬಬ್ಬೂರುಕಮ್ಮೆ ಸೇವಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಭದ್ರಾವತಿ, ಸೆ. ೩: ನಗರದ ಜನ್ನಾಪುರ ಬಬ್ಬೂರುಕಮ್ಮೆ ಸೇವಾ ಸಂಘದ ವತಿಯಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಪ್ರತಿಭಾವಂತ ವಿದ್ಯಾರ್ಥಿಗಳಾದ ಸ್ಕಂದ ಭಾರದ್ವಾಜ್ ಮತ್ತು ವಿಕಾಸ್ ಅವರನ್ನು ತಾಲೂಕು ಬ್ರಾಹ್ಮಣ ಸಭಾ ಪ್ರಮುಖರಾದ ಎ.ಎನ್ ಸುರೇಶ್ ಸನ್ಮಾನಿಸಿ ಗೌರವಿಸಿದರು. ಬಬ್ಬೂರುಕಮ್ಮೆ ಸೇವಾ ಸಂಘದ ಅಧ್ಯಕ್ಷ ಎಚ್.ಎಸ್ ನಂಜುಂಡಯ್ಯ ಅಧ್ಯಕ್ಷತೆ ವಹಿಸಿದ್ದರು,
ಎಚ್.ಆರ್ ಸುಧಾ ಪ್ರಾರ್ಥಿಸಿದರು, ಡಾ.ಎಂ.ಎಚ್ ವಿದ್ಯಾಶಂಕರ್ ಸ್ವಾಗತಿಸಿದರು. ಎಚ್.ಆರ್ ಶ್ರೀಧರೇಶ್ ಭಾರದ್ವಾಜ್ ನಿರೂಪಿಸಿ, ದಿನೇಶ್ ವಂದಿಸಿದರು.
No comments:
Post a Comment