ಕರ್ನಾಟಕ ಕಾನೂನು ಆಯೋಗ ಸಿದ್ಧಪಡಿಸಿರುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-೨೦೨೨ ಒಮ್ಮತ ವ್ಯಕ್ತಪಡಿಸುವಂತೆ ಆಗ್ರಹಿಸಿ ಭದ್ರಾವತಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶಾಸಕ ಬಿ.ಕೆ ಸಂಗಮೇಶ್ವರ್ಗೆ ಮನವಿ ಸಲ್ಲಿಸಲಾಯಿತು.
ಭದ್ರಾವತಿ, ಸೆ. ೧೧: ಕರ್ನಾಟಕ ಕಾನೂನು ಆಯೋಗ ಸಿದ್ಧಪಡಿಸಿರುವ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ವಿಧೇಯಕ-೨೦೨೨ ಒಮ್ಮತ ವ್ಯಕ್ತಪಡಿಸುವಂತೆ ಆಗ್ರಹಿಸಿ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ ಶಾಸಕ ಬಿ.ಕೆ ಸಂಗಮೇಶ್ವರ್ಗೆ ಮನವಿ ಸಲ್ಲಿಸಲಾಯಿತು.
ಕನ್ನಡ ಭಾಷೆ, ನಾಡು-ನುಡಿ ಬಗ್ಗೆ ಹೆಚ್ಚಿನ ಅಭಿಮಾನ ಹೊಂದುವ ಜೊತೆಗೆ ಪರಿಷತ್ ಕಾರ್ಯ ಚಟುವಟಿಕೆಗಳಿಗೆ ಹೆಚ್ಚಿನ ಸಹಕಾರ ನೀಡುತ್ತಿರುವ ಶಾಸಕರು ವಿಧಾನಸಭಾ ಅಧಿವೇಶನದಲ್ಲಿ ಮಂಡನೆಯಾಗಲಿರುವ ವಿಧೇಯಕ ಅಂಗೀಕಾರದಲ್ಲಿ ಪ್ರಮುಖ ಪಾತ್ರ ವಹಿಸುವಂತೆ ಕೋರಲಾಯಿತು.
ಪರಿಷತ್ ತಾಲೂಕು ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ, ಕಾರ್ಯದರ್ಶಿ ಎಚ್. ತಿಮ್ಮಪ್ಪ, ಕೋಶಾಧ್ಯಕ್ಷ ಕೆ.ಟಿ ಪ್ರಸನ್ನ, ಸಂಘಟನಾ ಕಾರ್ಯದರ್ಶಿ ನಾಗೋಜಿರಾವ್ ಹಾಗೂ ಸದಸ್ಯ ಪ್ರಕಾಶ್ ಉಪಸ್ಥಿತರಿದ್ದರು.
No comments:
Post a Comment