ನೇಪಾಳದ ಪೊಖಾರದಲ್ಲಿ ಜರುಗಿದ ೨ನೇ ಇಂಡೋ ನೇಪಾಳ್ ಚಾಂಪಿಯನ್ಶಿಪ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಡಿಸ್ಕಸ್ ಥ್ರೋ ಸ್ಪರ್ಧೆಯಲ್ಲಿ ಪ್ರಶಸ್ತಿ ಪಡೆದಿರುವ ಭದ್ರಾವತಿ ತಾಲೂಕಿನ ಕಾರೇಹಳ್ಳಿ ಬಾಲಗಂಗಾಧರನಾಥ ಸ್ವಾಮೀಜಿ ಕೇಂದ್ರೀಯ ವಿದ್ಯಾಲಯ(ಬಿಜಿಎಸ್ ಶಾಲೆ) ವಿದ್ಯಾರ್ಥಿ ಬಿ.ಎಂ ವೇದಾಂತ್ ಅವರನ್ನು ಭಾನುವಾರ ವಿಐಎಸ್ಎಲ್ ಉದ್ಯೋಗಿಗಳ ಸಹಕಾರ ಬ್ಯಾಂಕ್ ನಿಯಮಿತದಿಂದ ಸನ್ಮಾನಿಸಿ ಗೌರವಿಸಲಾಯಿತು.
ಭದ್ರಾವತಿ, ಸೆ. ೧೧: ನೇಪಾಳದ ಪೊಖಾರದಲ್ಲಿ ಜರುಗಿದ ೨ನೇ ಇಂಡೋ ನೇಪಾಳ್ ಚಾಂಪಿಯನ್ಶಿಪ್ ಪಂದ್ಯಾವಳಿಯಲ್ಲಿ ಭಾಗವಹಿಸಿ ಡಿಸ್ಕಸ್ ಥ್ರೋ ಸ್ಪರ್ಧೆಯಲ್ಲಿ ಪ್ರಶಸ್ತಿ ಪಡೆದಿರುವ ತಾಲೂಕಿನ ಕಾರೇಹಳ್ಳಿ ಬಾಲಗಂಗಾಧರನಾಥ ಸ್ವಾಮೀಜಿ ಕೇಂದ್ರೀಯ ವಿದ್ಯಾಲಯ(ಬಿಜಿಎಸ್ ಶಾಲೆ) ವಿದ್ಯಾರ್ಥಿ ಬಿ.ಎಂ ವೇದಾಂತ್ ಅವರನ್ನು ಭಾನುವಾರ ವಿಐಎಸ್ಎಲ್ ಉದ್ಯೋಗಿಗಳ ಸಹಕಾರ ಬ್ಯಾಂಕ್ ನಿಯಮಿತದಿಂದ ಸನ್ಮಾನಿಸಿ ಗೌರವಿಸಲಾಯಿತು.
ನ್ಯೂಟೌನ್ ಶಾರದ ಮಂದಿರದಲ್ಲಿ ನಡೆದ ಬ್ಯಾಂಕಿನ ೯೮ನೇ ವಾರ್ಷಿಕ ಮಹಾಸಭೆಯಲ್ಲಿ ಬ್ಯಾಂಕಿನ ಉದ್ಯೋಗಿ ಮಂಜುನಾಥ್ ಅವರ ಪುತ್ರರಾಗಿರುವ ಬಿ.ಎಂ ವೇದಾಂತ್ ಅವರನ್ನು ಸನ್ಮಾನಿಸಲಾಯಿತು. ಬ್ಯಾಂಕಿನ ಉಪಾಧ್ಯಕ್ಷೆ ಕೆ. ಚಂದ್ರಾವತಿ ಅಧ್ಯಕ್ಷತೆ ವಹಿಸಿದ್ದರು. ಎಚ್.ಎಸ್ ರಾಘವೇಂದ್ರ, ಆರ್. ಪ್ರೇಮ್ಕುಮಾರ್, ಬಿ. ಸಂತೋಷ್ಕುಮಾರ್, ಪಿ. ರಾಜು, ಕೆ.ಎಸ್ ರಾಘವೇಂದ್ರ, ಎಚ್.ಆರ್ ದಿವಾಕರ್, ವೈ.ಎಸ್ ನಾಗೇಶ್, ಸಿ. ವಿನಯ್ಕುಮಾರ್ ಮತ್ತು ಕೆ.ಎಚ್ ಬಸವರಾಜ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment