Saturday, September 24, 2022

ಸೆ.೨೬ರಂದು ಜಿಲ್ಲಾಧಿಕಾರಿ ಕಛೇರಿ ಆವರಣದಲ್ಲಿ ಬೃಹತ್ ಪ್ರತಿಭಟನೆ, ಸಭೆ

    ಭದ್ರಾವತಿ, ಸೆ. ೨೪: ಕೇಂದ್ರ ಸರ್ಕಾರದ ವಿದ್ಯುಚ್ಛಕ್ತಿ ಖಾಸಗೀಕರಣ ಮತ್ತು ರೈತರ ಐ.ಪಿ ಸೆಟ್ಟುಗಳಿಗೆ ಮೀಟರ್ ಅಳವಡಿಸುವ ರೈತ ವಿರೋಧಿ ನೀತಿಯನ್ನು ಖಂಡಿಸಿ ಸೆ.೨೬ರಂದು ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ಜಿಲ್ಲಾ ಶಾಖೆವತಿಯಿಂದ ರೈತರ ಬೃಹತ್ ಪ್ರತಿಭಟನೆ ಮತ್ತು ಸಭೆಯನ್ನು ಹಮ್ಮಿಕೊಳ್ಳಲಾಗಿದೆ.
    ಜಿಲ್ಲಾಧಿಕಾರಿಗಳ ಕಛೇರಿ ಆವರಣದಲ್ಲಿ ನಡೆಯಲಿರುವ ಬೃಹತ್ ಪ್ರತಿಭಟನೆ ಮತ್ತು ಸಭೆಯಲ್ಲಿ ರೈತರು, ಮಹಿಳೆಯರು, ಕಾರ್ಮಿಕರು, ವಿದ್ಯಾರ್ಥಿಗಳು, ಯುವಕ-ಯುವತಿಯರು, ಚಿಂತಕರು, ಬರಹಗಾರರು ಸೇರಿದಂತೆ ಸಮಸ್ತ ನಾಗರೀಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘ, ಹಸಿರು ಸೇನೆ ತಾಲೂಕು ಅಧ್ಯಕ್ಷ ಎಚ್.ಪಿ ಹಿರಿಯಣಯ್ಯ, ಕಾರ್ಯದರ್ಶಿ ರಾಮಚಂದ್ರರಾವ್ ಹಾಗು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಡಿ.ವಿ ವೀರೇಶ್ ಕೋರಿದ್ದಾರೆ. 

No comments:

Post a Comment