Monday, September 19, 2022

ಸೆ.೨೧ರಂದು ಮಹಾತ್ಮಗಾಂಧೀಜಿ, ಸ್ವಾತಂತ್ರ್ಯ ಚಳವಳಿ ಕುರಿತಾದ ರಸಪ್ರಶ್ನೆ ಕಾರ್ಯಕ್ರಮ

    ಭದ್ರಾವತಿ, ಸೆ. ೧೯: ಕನ್ನಡ ಸಾಹಿತ್ಯ ಪರಿಷತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಹಕಾರದೊಂದಿಗೆ ಸಂಚಿ ಹೊನ್ನಮ್ಮ ಪದವಿ ಪೂರ್ವ ಕಾಲೇಜಿನ ಸಹಯೋಗದೊಂದಿಗೆ ಸೆ.೨೧ರಂದು ಬೆಳಿಗ್ಗೆ ೧೦ ಗಂಟೆಗೆ ಪ್ರೌಢಶಾಲೆ ಪದವಿಪೂರ್ವ ಮತ್ತು ಪದವಿ ಕಾಲೇಜು ವಿದ್ಯಾರ್ಥಿಗಳಿಗಾಗಿ ಮಹಾತ್ಮಗಾಂಧೀಜಿ ಹಾಗು ಸ್ವಾತಂತ್ರ್ಯ ಚಳವಳಿ ಕುರಿತಾದ ರಸಪ್ರಶ್ನೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
    ಸಂಚಿಹೊನ್ಮಮ್ಮ ಪದವಿ ಪೂರ್ವ ಕಾಲೇಜಿನಲ್ಲಿ ನಡೆಯಲಿರುವ ಕಾರ್ಯಕ್ರಮವನ್ನು ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಲಿದ್ದು, ಕಾಲೇಜಿನ ಪ್ರಾಂಶುಪಾಲ ಡಾ. ಸಿದ್ದಲಿಂಗಮೂರ್ತಿ, ಮೆಸ್ಕಾಂ ಗ್ರಾಮಾಂತರ ಉಪವಿಭಾಗದ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಅಬ್ದುಲ್ ಮುನಾಫ್, ಕ್ಷೇತ್ರ ಶಿಕ್ಷಣಾಧಿಕಾರಿ ಎ.ಕೆ ನಾಗೇಂದ್ರಪ್ಪ, ಕ್ಷೇತ್ರ ಶಿಕ್ಷಣ ಸಮನ್ವಯಾಧಿಕಾರಿ ವಿ.ಎಚ್ ಪಂಚಾಕ್ಷರಿ, ಕರ್ನಾಟಕ ಜಾನಪದ ಪರಿಷತ್ ತಾಲೂಕು ಅಧ್ಯಕ್ಷ ಕೋಡ್ಲು ಯಜ್ಞಯ್ಯ, ಕನ್ನಡ ಸಾಹಿತ್ಯ ಸಾಂಸ್ಕೃತಿಕ ವೇದಿಕೆ ತಾಲೂಕು ಅಧ್ಯಕ್ಷೆ ಎಂ.ಎಸ್ ಸುಧಾಮಣಿ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.
    ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷ ಡಿ. ಮಂಜುನಾಥ್ ಆಶಯನುಡಿಗಳನ್ನಾಡಲಿದ್ದು, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಬಿ. ಸಿದ್ದಬಸಪ್ಪ ಅವರಿಗೆ ಅಭಿನಂದನೆ ನಡೆಯಲಿದೆ. ಕಸಾಪ ತಾಲೂಕು ಅಧ್ಯಕ್ಷ ಕೋಗಲೂರು ತಿಪ್ಪೇಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ.

No comments:

Post a Comment