ಭದ್ರಾವತಿ, ಸೆ. ೨೪ : ನಗರ ವ್ಯಾಪ್ತಿಯ ೭ ನ್ಯಾಯಬೆಲೆ ಅಂಗಡಿಗಳನ್ನು ವ್ಯಾಪಕ ಭ್ರಷ್ಟಾಚಾರ ಹಿನ್ನಲೆಯಲ್ಲಿ ಅಮಾನತ್ತುಗೊಳಿಸಲಾಗಿದ್ದು, ಈ ನ್ಯಾಯಬೆಲೆ ಅಂಗಡಿಗಳನ್ನು ರದ್ದು ಮಾಡುವಂತೆ ಆಗ್ರಹಿಸಿ ಸೆ.೨೬ರಂದು ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.
ನಗರ ವ್ಯಾಪ್ತಿಯ ಸುಪ್ರೀಂ, ನ್ಯಾಷನಲ್ ಮತ್ತು ಜನತಾ ನ್ಯಾಯಬೆಲೆ ಅಂಗಡಿ ಸೇರಿದಂತೆ ಒಟ್ಟು ೭ ನ್ಯಾಯಬೆಲೆ ಅಂಗಡಿಗಳನ್ನು ವ್ಯಾಪಕ ಭ್ರಷ್ಟಾಚಾರದ ಹಿನ್ನಲೆಯಲ್ಲಿ ಅಮಾನತ್ತುಗೊಳಿಸಲಾಗಿದೆ. ಈ ಹಿನ್ನಲೆಯಲ್ಲಿ ಈ ನ್ಯಾಯಬೆಲೆ ಅಂಗಡಿಗಳನ್ನು ರದ್ದು ಮಾಡುವಂತೆ ಆಗ್ರಹಿಸಿ ಬೆಳಿಗ್ಗೆ ೧೧.೩೦ಕ್ಕೆ ಜನತಾದಳ(ಸಂಯುಕ್ತ) ಕರ್ನಾಟಕ ವತಿಯಿಂದ ನಗರದ ಮಾನವ ಹಕ್ಕುಗಳ ಹೋರಾಟ ಸಮಿತಿ ಹಾಗು ಕೆಆರ್ಎಸ್ ಪಕ್ಷ ಸಹಕಾರದೊಂದಿಗೆ ಬಿ.ಎಚ್ ರಸ್ತೆ ಅಂಡರ್ಬಿಡ್ಜ್ ಡಾ. ಬಿ.ಆರ್ ಅಂಬೇಡ್ಕರ್ ವೃತ್ತದಿಂದ ತಾಲೂಕು ಕಛೇರಿವರೆಗೂ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.
ಪಾದಯಾತ್ರೆ ನಂತರ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಜೆಡಿಯು ರಾಜ್ಯ ಕಾರ್ಯದರ್ಶಿ ಶಶಿಕುಮಾರ್ ಗೌಡ ಮನವಿ ಮಾಡಿದ್ದಾರೆ.
No comments:
Post a Comment