Thursday, September 29, 2022

ಪರಿಸರ ದಸರಾ : ಗಮನ ಸೆಳೆದ ಬೀದಿ ನಾಟಕ

ಭದ್ರಾವತಿ ನಗರಸಭೆ ವತಿಯಿಂದ ಪರಿಸರ ದಸರಾ ಅಂಗವಾಗಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಬೀದಿ ನಾಟಕ ಪ್ರದರ್ಶನ ಗಮನ ಸೆಳೆಯಿತು.
    ಭದ್ರಾವತಿ, ಸೆ. ೨೯; ನಗರಸಭೆ ವತಿಯಿಂದ ಪರಿಸರ ದಸರಾ ಅಂಗವಾಗಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಬೀದಿ ನಾಟಕ ಪ್ರದರ್ಶನ ಗಮನ ಸೆಳೆಯಿತು.
    ನಗರದ ಸ್ವಚ್ಛತೆಯಲ್ಲಿ ಪೌರಕಾರ್ಮಿಕರ ಪಾತ್ರ ಹಾಗು ನಾಗರೀಕರ ಜವಾಬ್ದಾರಿ ಮತ್ತು ಪ್ಲಾಸ್ಟಿಕ್ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳ ಕುರಿತು ಬೀದಿ ನಾಟಕದ ಮೂಲಕ ಜಾಗೃತಿ ಮೂಡಿಸಲಾಯಿತು.
    ಅಂಬೇಡ್ಕರ್ ಜಾನಪದ ಕಲಾ ತಂಡದ ಕಲಾವಿದರಾದ ತಮಟೆ ಜಗದೀಶ್, ದಿವಾಕರ್, ಜಿ. ರವಿಕುಮಾರ್, ಷಣ್ಮುಖಪ್ಪ, ಆಂಜನಪ್ಪ ಮತ್ತು ರವಿನಾಯ್ಕ ಅವರ ಅಭಿನಯ ಎಲ್ಲರ ಗಮನ ಸೆಳೆಯಿತು.


    ಇದಕ್ಕೂ ಮೊದಲು ಬಿ.ಎಚ್ ರಸ್ತೆ ಅಂಬೇಡ್ಕರ್ ವೃತ್ತದಿಂದ ವಿದ್ಯಾರ್ಥಿಗಳು, ನಗರಸಭೆ ಸದಸ್ಯರು, ಅಧಿಕಾರಿಗಳು, ಸಿಬ್ಬಂದಿಗಳು, ಪೌರಕಾರ್ಮಿಕರು, ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಜಾಗೃತಿ ಜಾಥಾ ನಡೆಸಲಾಯಿತು.

No comments:

Post a Comment