Wednesday, October 26, 2022

ಅ.27ರಂದು ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರುಗಳವರ ಇಷ್ಟಲಿಂಗ ಮಹಾಪೂಜೆ


ಭದ್ರಾವತಿ, ಅ. 26:  ಬಾಳೆಹೊನ್ನೂರು ಶ್ರೀಮದ್ ರಂಭಾಪುರಿ ಜಗದ್ಗುರುಗಳವರ ಇಷ್ಟಲಿಂಗ ಮಹಾಪೂಜೆ ಅ.27ರಂದು ಬೆಳಗ್ಗೆ 9 ಗಂಟೆಗೆ ನಗರದ ಬಿ.ಎಚ್ ರಸ್ತೆ ಲೋಯರ್ ಹುತ್ತಾ ಸಹ್ಯಾದ್ರಿ ಬಡಾವಣೆಯ  ಶ್ರೀರಂಗನಾಥ ಕೃಪಾ ನಿವಾಸದಲ್ಲಿ ನಡೆಯಲಿದೆ.
 ಶ್ರೀ ಜಗದ್ಗುರು  ಪ್ರಸನ್ನ ರೇಣುಕಾ ಡಾ. ವೀರ ಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಭಗವತ್ಪಾದರು ಕಾರ್ಯಕ್ರಮ ಉದ್ಘಾಟಿಸಲಿದ್ದು, ತೀರ್ಥಹಳ್ಳಿ ಮಳಲಿ ಮಠದ ಶ್ರೀ ಗುರು ನಾಗಭೂಷಣ ಶಿವಾಚಾರ್ಯ ಸ್ವಾಮೀಜಿ ನೇತೃತ್ವ ವಹಿಸಲಿದ್ದಾರೆ. ಶ್ರೀರಂಗನಾಥ ಗ್ಯಾಸ್ ಸರ್ವಿಸ್ ಎಂ. ಮನು ಉಪಸ್ಥಿತರಿರುವರು. 
 ಶಾಸಕ ಬಿ.ಕೆ ಸಂಗಮೇಶ್ವರ್, ವಿಧಾನ ಪರಿಷತ್ ಸದಸ್ಯ ಆಯನೂರು ಮಂಜುನಾಥ್, ನಗರಸಭೆ ಮಾಜಿ ಅಧ್ಯಕ್ಷರಾದ ಬಿ. ಕೆ ಮೋಹನ್, ಗೀತಾ ರಾಜಕುಮಾರ್, ಕೆ ಆರ್ ರಾಜು, ಎಸ್.ಎಸ್ ಜ್ಯೋತಿಪ್ರಕಾಶ್, ಮಹೇಶ್ವರಮೂರ್ತಿ ಸ್ವಾಮೀಜಿ, ಸಿದ್ದಲಿಂಗ ಸ್ವಾಮೀಜಿ, ಹೆಬ್ಬಂಡಿ ಶಿವರುದ್ರಪ್ಪ ಲೋಕಣ್ಣ, ಗಿರಿರಾಜ್, ಯುವಮೂರ್ತಿ, ಆರ್ ಮಹೇಶ್ ಕುಮಾರ್, ಅಡವಿಶಯ್ಯ, ಕೂಡ್ಲಿಗೆರೆ ಹಾಲೇಶ್ ಸೇರಿದಂತೆ ಇನ್ನಿತರರು ಪಾಲ್ಗೊಳ್ಳಲಿದ್ದಾರೆ. 

No comments:

Post a Comment