ಭಾನುವಾರ, ಅಕ್ಟೋಬರ್ 30, 2022

ದೀಪೋತ್ಸವ, ತಿರುಪತಿ ಮಾದರಿ ಹುಂಡಿ ಪ್ರತಿಷ್ಠಾಪನೆ

ಭದ್ರಾವತಿ ತಾಲೂಕಿನ ಬಾರಂದೂರು ಗ್ರಾಮದಲ್ಲಿರುವ ಶ್ರೀ ಲಕ್ಷ್ಮೀ ವೆಂಕಟೇಶ್ವರ ಪದ್ಮಾವತಿ ದೇವಾಲಯದಲ್ಲಿ ಕಾರ್ತಿಕ ಮಾಸದ ಹಿನ್ನಲೆಯಲ್ಲಿ ಮೊದಲ ದೀಪೋತ್ಸವ ಹಾಗು ಹುಂಡಿ ಪ್ರತಿಷ್ಠಾಪನೆ ನಡೆಯಿತು.
    ಭದ್ರಾವತಿ, ಅ. ೩೦ : ತಾಲೂಕಿನ ಬಾರಂದೂರು ಗ್ರಾಮದಲ್ಲಿರುವ ಶ್ರೀ ಲಕ್ಷ್ಮೀ ವೆಂಕಟೇಶ್ವರ ಪದ್ಮಾವತಿ ದೇವಾಲಯದಲ್ಲಿ ಕಾರ್ತಿಕ ಮಾಸದ ಹಿನ್ನಲೆಯಲ್ಲಿ ಮೊದಲ ದೀಪೋತ್ಸವ ಹಾಗು ಹುಂಡಿ ಪ್ರತಿಷ್ಠಾಪನೆ ನಡೆಯಿತು.
      ದೇವಾಲಯದಲ್ಲಿ ವಂದೇ ಮಾತರಂ ಟ್ರಸ್ಟ್ ವತಿಯಿಂದ ಹಲವಾರು ಧಾರ್ಮಿಕ ಕಾರ್ಯಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರಲಾಗುತ್ತಿದ್ದು, ಅಲ್ಲದೆ ದಾನಿಗಳು ಹಾಗು ಭಕ್ತರ ಸಹಕಾರದೊಂದಿಗೆ ದೇವಾಲಯದಲ್ಲಿ ಹಲವಾರು ಅಭಿವೃದ್ಧಿ ಕಾರ್ಯಗಳು ಸಹ ನಡೆಯುತ್ತಿವೆ. ಈ ಬಾರಿ ಕಾರ್ತಿಕ ಮಾಸದಲ್ಲಿ ವಿಶೇಷವಾಗಿ ತಿರುಪತಿ ಮಾದರಿ ಹುಂಡಿಯನ್ನು ದೇವಾಲಯದಲ್ಲಿ ಪ್ರತಿಷ್ಠಾಪಿಸಲಾಗಿದೆ. ಟ್ರಸ್ಟ್ ಅಧ್ಯಕ್ಷ ಬಿ.ಎ ಪ್ರಸನ್ನಕುಮಾರ್ ಹಾಗು ದೇವಾಲಯದ ಪ್ರಮುಖರು ಸೇರಿದಂತೆ ಇನ್ನಿತರರು ಪಾಲ್ಗೊಂಡಿದ್ದರು.

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ