Sunday, October 16, 2022

ಜನ್ನಾಪುರ ಲಿಂಗಾಯತರ ಬೀದಿ ವಿನಾಯಕ ಮೂರ್ತಿ ವಿಸರ್ಜನೆ

ಭದ್ರಾವತಿ ನಗರಸಭೆ ವ್ಯಾಪ್ತಿಯ ಜನ್ನಾಪುರ ಲಿಂಗಾಯತರ ಬೀದಿಯಲ್ಲಿ ಸ್ವಾಗತ್ ಯುವಕರ ಸಂಘದ ವತಿಯಿಂದ ೨೫ನೇ ವರ್ಷದ ಅಂಗವಾಗಿಪ್ರತಿಷ್ಠಾಪಿಸಲಾಗಿದ್ದ ಶ್ರೀ ವಿನಾಯಕ ಮೂರ್ತಿ ವಿಸರ್ಜನೆ ಭಾನುವಾರ ವಿಜೃಂಭಣೆಯಿಂದ ಜರುಗಿತು.
    ಭದ್ರಾವತಿ, ಅ. ೧೬ : ನಗರಸಭೆ ವ್ಯಾಪ್ತಿಯ ಜನ್ನಾಪುರ ಲಿಂಗಾಯತರ ಬೀದಿಯಲ್ಲಿ ಸ್ವಾಗತ್ ಯುವಕರ ಸಂಘದ ವತಿಯಿಂದ ೨೫ನೇ ವರ್ಷದ ಅಂಗವಾಗಿಪ್ರತಿಷ್ಠಾಪಿಸಲಾಗಿದ್ದ ಶ್ರೀ ವಿನಾಯಕ ಮೂರ್ತಿ ವಿಸರ್ಜನೆ ಭಾನುವಾರ ವಿಜೃಂಭಣೆಯಿಂದ ಜರುಗಿತು.
    ಡೊಳ್ಳು ಕುಣಿತ ಸೇರಿದಂತೆ ವಿವಿಧ ಕಲಾ ತಂಡಗಳೊಂದಿಗೆ ಸಂಜೆ ಪ್ರಮುಖ ರಸ್ತೆಗಳಲ್ಲಿ ವಿಸರ್ಜನಾ ಪೂರ್ವ ಮೆರವಣಿಗೆ ನಡೆಯಿತು. ನಗರದ ವಿವಿಧ ಸಂಘಟನೆಗಳ, ರಾಜಕೀಯ ಪಕ್ಷಗಳ ಪ್ರಮುಖರು, ಜನಪ್ರತಿನಿಧಿಗಳು, ಕಾರ್ಯಕರ್ತರು, ಸೇವಾಕರ್ತರು, ಸ್ಥಳೀಯರು ಮೆರವಣಿಗೆಯಲ್ಲಿ ಪಾಲ್ಗೊಂಡು ಸಂಭ್ರಮಿಸಿದರು. ಸಂಘದ ಪದಾಧಿಕಾರಿಗಳು, ಪ್ರಮುಖರು ಉಪಸ್ಥಿತರಿದ್ದರು. ಪ್ರತಿ ವರ್ಷದಂತೆ ಈ ಬಾರಿ ಸಹ ಜನ್ನಾಪುರ ಕೆರೆಯಲ್ಲಿ ಮೂರ್ತಿಯನ್ನು ವಿಸರ್ಜಿಸಲಾಯಿತು.
    ಅಯೋಧ್ಯೆ ಶ್ರೀರಾಮ ಮಂದಿರ ಮಾದರಿ ಭವ್ಯ ವೇದಿಕೆಯಲ್ಲಿ ಪ್ರತಿಷ್ಠಾಪಿಸಲಾಗಿದ್ದ ಶ್ರೀ ವಿನಾಯಕ ಮೂರ್ತಿ ಈ ಬಾರಿ ಭಕ್ತರ ಗಮನ ಸೆಳೆದಿತ್ತು. ಸಂಘದ ವತಿಯಿಂದ ವಿವಿಧ ಧಾರ್ಮಿಕ ಹಾಗು ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗು ಅನ್ನಸಂತರ್ಪಣೆ ಏರ್ಪಡಿಸಲಾಗಿತ್ತು.

No comments:

Post a Comment