Monday, October 17, 2022

ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನಕ್ಕೆ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಭೇಟಿ

ಭದ್ರಾವತಿ ಹಳೇನಗರದ ಪುರಾಣ ಪ್ರಸಿದ್ದ, ಕ್ಷೇತ್ರಪಾಲಕ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನಕ್ಕೆ ಬೆಳಗಾವಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸೋಮವಾರ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದರು.
    ಭದ್ರಾವತಿ, ಅ. ೧೭ : ಹಳೇನಗರದ ಪುರಾಣ ಪ್ರಸಿದ್ದ, ಕ್ಷೇತ್ರಪಾಲಕ ಶ್ರೀ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನಕ್ಕೆ ಬೆಳಗಾವಿ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ಸೋಮವಾರ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದರು.
    ಶಾಸಕ ಬಿ.ಕೆ ಸಂಗಮೇಶ್ವರ್ ಅವರ ಸಹೋದರ ಬಿ.ಕೆ ಶಿವಕುಮಾರ್ ಅವರ ಪುತ್ರಿಯನ್ನು ಲಕ್ಷ್ಮೀ ಹೆಬ್ಬಾಳ್ಕರ್ ಅವರ ಪುತ್ರನಿಗೆ ನೀಡಿ ವಿವಾಹ ಮಾಡಲಾಗಿದ್ದು, ಈ ಹಿನ್ನಲೆಯಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಸಂಗಮೇಶ್ವರ್ ಅವರಿಗೆ ಸಂಬಂಧಿಸಿಯಾಗಿದ್ದಾರೆ.
    ಹೆಬ್ಬಾಳ್ಕರ್ ಅವರು ಸ್ಥಳೀಯ ಮುಖಂಡರು ಹಾಗು ಸಂಬಂಧಿಕರೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಧಾನ ಅರ್ಚಕ ವೇದಬ್ರಹ್ಮ ರಂಗನಾಥಶರ್ಮ ಅವರಿಂದ ದೇವಸ್ಥಾನದ ಕುರಿತು ಸಂಪೂರ್ಣ ಮಾಹಿತಿ ಪಡೆದು ದೇವಸ್ಥಾನದ ಅಭಿವೃದ್ಧಿಗೆ ಮುಂದಾಗುವುದಾಗಿ ಭರವಸೆ ನೀಡಿದರು.
    ದೇವಸ್ಥಾನದ ಸಹಾಯಕ ಅರ್ಚಕ ಶ್ರೀನಿವಾಸ್, ಬಿ.ಕೆ ಶಿವಕುಮಾರ್, ಬಸವಂತಪ್ಪ, ದಶರಥಗಿರಿ, ಎಂ.ಎಸ್ ರವಿ, ನರಸಿಂಹಚಾರ್, ಬಿ.ಎಂ ರವಿಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment