Monday, October 3, 2022

ಭಕ್ತರ ಗಮನ ಸೆಳೆದ ಶ್ರೀ ಬನಶಂಕರಿ ಅಮ್ಮನವರ ಮಹಿಷಾಸುರ ಮರ್ದಿನಿ ಅಲಂಕಾರ

ಭದ್ರಾವತಿ ಹೊಸ ಸೇತುವೆ ರಸ್ತೆಯಲ್ಲಿರುವ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ೧೧ನೇ ವರ್ಷದ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಅಮ್ಮನವರಿಗೆ ಪ್ರತಿದಿನ ವಿವಿಧ ಅಲಂಕಾರ ಕೈಗೊಳ್ಳಲಾಗಿದ್ದು, ಸೋಮವಾರ ಮಹಿಷಾಸುರ ಮರ್ದಿನಿ ಅಲಂಕಾರ ಭಕ್ತರ ಗಮನ ಸೆಳೆಯಿತು.
    ಭದ್ರಾವತಿ, ಅ. ೩: ನಗರದ ಹೊಸ ಸೇತುವೆ ರಸ್ತೆಯಲ್ಲಿರುವ ಶ್ರೀ ಬನಶಂಕರಿ ದೇವಸ್ಥಾನದಲ್ಲಿ ೧೧ನೇ ವರ್ಷದ ಶರನ್ನವರಾತ್ರಿ ಮಹೋತ್ಸವದ ಅಂಗವಾಗಿ ಅಮ್ಮನವರಿಗೆ ಪ್ರತಿದಿನ ವಿವಿಧ ಅಲಂಕಾರ ಕೈಗೊಳ್ಳಲಾಗಿದ್ದು, ಸೋಮವಾರ ಮಹಿಷಾಸುರ ಮರ್ದಿನಿ ಅಲಂಕಾರ ಭಕ್ತರ ಗಮನ ಸೆಳೆಯಿತು.
    ಅಮ್ಮನವರಿಗೆ ಗಜಲಕ್ಷ್ಮಿ, ಸ್ಕಂದ ಮಾತೇ, ರಾಜರಾಜೇಶ್ವರಿ, ಧನಲಕ್ಷ್ಮೀ, ಶಾಖಾಂಬರಿ, ಸಪ್ತಮಿ ಸರಸ್ವತಿ ಮತ್ತು ಮಹಿಷಾಸುರ ಮರ್ದಿನಿ ಅಲಂಕಾರಗಳನ್ನು ಕೈಗೊಳ್ಳಲಾಗಿದ್ದು, ಪ್ರತಿಯೊಂದು ಅಲಂಕಾರ ಸಹ ಭಕ್ತರ ಮನಸೂರೆಗೊಂಡಿತು. ಅಲ್ಲದೆ ಪ್ರತಿದಿನ ಸಾಂಸ್ಕೃತಿಕ ಕಾರ್ಯಕ್ರಮಗಳು, ಅನ್ನಸಂತರ್ಪಣೆ ಸೇರಿದಂತೆ ಇನ್ನಿತರ ಕಾರ್ಯಕ್ರಮಗಳು ಜರುಗಿದವು.
    ನಗರದ ವಿವಿಧೆಡೆಗಳಿಂದ ಭಕ್ತರು ಪಾಲ್ಗೊಂಡು ಅಮ್ಮನವರ ದರ್ಶನ ಪಡೆದು ಕೃಪೆಗೆ ಪಾತ್ರರಾದರು. ದೇವಸ್ಥಾನ ಸೇವಾ ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು, ಕಾರ್ಯಕಾರಿ ಸಮಿತಿ ಸದಸ್ಯರು, ನಾಮಕರಣ ಹಾಗು ಹೆಚ್ಚುವರಿ ನಾಮಕರಣ ಕಾರ್ಯಕಾರಿ ಸಮಿತಿ ಸದಸ್ಯರು ಸೇರಿದಂತೆ ಸೇವಾಕರ್ತರು ಕಾರ್ಯಕ್ರಮಗಳು ಯಶಸ್ವಿಯಾಗಿ ನಡೆಯುವಲ್ಲಿ ಹೆಚ್ಚಿನ ಶ್ರಮ ವಹಿಸಿದ್ದರು.

No comments:

Post a Comment