ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗೆ ಉಚಿತವಾಗಿ ಬಸ್ಪಾಸ್ ನೀಡಲಾಗುತ್ತಿದ್ದು, ಭದ್ರಾವತಿ ತಾಲೂಕಿನ ೬ ಮಂದಿ ಫಲಾನುಭವಿಗಳಿಗೆ ಶಾಸಕ ಬಿ.ಕೆ ಸಂಗಮೇಶ್ವರ್ ಶನಿವಾರ ಬಸ್ಪಾಸ್ ವಿತರಿಸಿದರು.
ಭದ್ರಾವತಿ, ಅ. ೨೨: ಕಾರ್ಮಿಕ ಇಲಾಖೆ ವತಿಯಿಂದ ಕಟ್ಟಡ ಕಾರ್ಮಿಕರಿಗೆ ಉಚಿತವಾಗಿ ಬಸ್ಪಾಸ್ ನೀಡಲಾಗುತ್ತಿದ್ದು, ತಾಲೂಕಿನಲ್ಲಿ ೬ ಜನರಿಗೆ ಮೊದಲ ಬಾರಿಗೆ ಬಸ್ಪಾಸ್ ಲಭಿಸಿದೆ.
ಶಾಸಕ ಬಿ.ಕೆ ಸಂಗಮೇಶ್ವರ್ ಶನಿವಾರ ಫಲಾನುಭವಿಗಳಿಗೆ ಬಸ್ಪಾಸ್ಗಳನ್ನು ವಿತರಿಸಿದರು. ರಾಜ್ಯಾದ್ಯಂತ ಸುಮಾರು ೧ ಲಕ್ಷ ಕಟ್ಟಡ ಕಾರ್ಮಿಕರಿಗೆ ಉಚಿತ ಬಸ್ಪಾಸ್ ನೀಡಲು ಸರ್ಕಾರ ಉದ್ದೇಶಿಸಿದ್ದು, ಶಿವಮೊಗ್ಗ ಜಿಲ್ಲೆಯಲ್ಲಿಯೇ ೧.೨೫ ಲಕ್ಷ ನೋಂದಾಯಿತ ಕಟ್ಟಡ ಕಾರ್ಮಿಕರಿದ್ದಾರೆ. ಕಾರ್ಮಿಕರು ತಮ್ಮ ಗುರುತಿನ ಚೀಟಿ ಹಾಗು ಆಧಾರ್ ಕಾರ್ಡ್ನೊಂದಿಗೆ ಆನ್ಲೈನ್ನಲ್ಲಿ ನೇರವಾಗಿ ಅರ್ಜಿ ಸಲ್ಲಿಸಿ ಬಸ್ಪಾಸ್ ಪಡೆಯುವ ಸೌಲಭ್ಯ ಕಲ್ಪಿಸಲಾಗಿದೆ. ಇದೀಗ ತಾಲೂಕಿನಲ್ಲಿ ಕೇವಲ ೬ ಮಂದಿಗೆ ಮಾತ್ರ ಬಸ್ಪಾಸ್ ಲಭಿಸಿದೆ.
ಕೆಎಸ್ಆರ್ಟಿಸಿ ಭದ್ರಾವತಿ ಘಟಕದ ವ್ಯವಸ್ಥಾಪಕಿ ಅಂಬಿಕಾ ಸುದೇಂದ್ರ, ಕಾಂಗ್ರೆಸ್ ಮುಖಂಡ ಅಮೀರ್ಜಾನ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment