Wednesday, October 5, 2022

ನಾಡಹಬ್ಬ ದಸರಾ ಉತ್ಸವ ಮೆರವಣಿಗೆಗೆ ಚಾಲನೆ

ಭದ್ರಾವತಿ: ನಗರಸಭೆ ನಾಡಹಬ್ಬ ದಸರಾ ಹಿನ್ನೆಲೆಯಲ್ಲಿ ಪ್ರತಿ ವರ್ಷದಂತೆ ಈ ಬಾರಿ ಸಹ ಬುಧವಾರ ಉತ್ಸವ ಮೆರವಣಿಗೆ ಹಮ್ಮಿಕೊಳ್ಳಲಾಗಿದ್ದು, ಮಳೆ ಹಿನ್ನೆಲೆಯಲ್ಲಿ ಉತ್ಸವ ಮೆರವಣಿಗೆ ವಿಳಂಬವಾಯಿತು.
ಮಧ್ಯಾಹ್ನ 2:30ಕ್ಕೆ ಆರಂಭಗೊಳ್ಳಬೇಕಿದ್ದ ಉತ್ಸವ ಮೆರವಣಿಗೆ ಸಂಜೆ 4:30 ಆದರೂ ಸಹ ಆರಂಭಗೊಳ್ಳಲಿಲ್ಲ. ಸುಮಾರು 10ಕ್ಕೂ  ಹೆಚ್ಚು ಅಲಂಕೃತಗೊಂಡ ದೇವಾನು ದೇವತೆಗಳು ಪಾಲ್ಗೊಂಡಿದ್ದವು. ಈ ನಡುವೆ ವಿಶ್ವ ಸ್ವರೂಪಿಣಿ ಮಾರಿಯಮ್ಮ ದೇವರು ಹೆಚ್ಚು ಆಕರ್ಷಕವಾಗಿ ಕಂಡು ಬರುವ ಮೂಲಕ ಎಲ್ಲರ ಗಮನ ಸೆಳೆಯತು. ಡೊಳ್ಳು ಕುಣಿತ, ವೀರಗಾಸೆ ಸೇರಿದಂತೆ ಇನ್ನಿತರ ಕಲಾ ತಂಡಗಳು ಭಾಗವಹಿಸಿದ್ದವು.

No comments:

Post a Comment