ಭದ್ರಾವತಿ ನಗರದ ಬಿ.ಎಚ್ ರಸ್ತೆ, ಹಾಲಪ್ಪ ವೃತ್ತದಲ್ಲಿ ಶ್ರೀ ಮಹಾಶಕ್ತಿ ಗಣಪತಿ ದೇವಸ್ಥಾನದ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ವಿನಾಯಕ ಚತುರ್ಥಿ ಅಂಗವಾಗಿ ಈ ಬಾರಿ ಸಹ ಶ್ರೀವಿನಾಯಕ ಮೂರ್ತಿ ಪ್ರತಿಷ್ಠಾಪಿಸಲಾಗಿದ್ದು, ಸತ್ಯನಾರಾಯಣ ಪೂಜೆ, ಹೋಮ-ಹವನ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.
ಭದ್ರಾವತಿ, ಅ. ೧೭ : ನಗರದ ಬಿ.ಎಚ್ ರಸ್ತೆ, ಹಾಲಪ್ಪ ವೃತ್ತದಲ್ಲಿ ಶ್ರೀ ಮಹಾಶಕ್ತಿ ಗಣಪತಿ ದೇವಸ್ಥಾನದ ಶ್ರೀ ವಿನಾಯಕ ಸೇವಾ ಸಮಿತಿ ವತಿಯಿಂದ ವಿನಾಯಕ ಚತುರ್ಥಿ ಅಂಗವಾಗಿ ಈ ಬಾರಿ ಸಹ ಶ್ರೀವಿನಾಯಕ ಮೂರ್ತಿ ಪ್ರತಿಷ್ಠಾಪಿಸಲಾಗಿದ್ದು, ಸತ್ಯನಾರಾಯಣ ಪೂಜೆ, ಹೋಮ-ಹವನ ಸೇರಿದಂತೆ ಇನ್ನಿತರ ಧಾರ್ಮಿಕ ಆಚರಣೆಗಳು ಜರುಗಿದವು.
ಈ ವಿನಾಯಕ ಸೇವಾ ಸಮಿತಿ ತನ್ನದೇ ಆದ ವಿಶಿಷ್ಟತೆಯನ್ನು ಹೊಂದಿದ್ದು, ನಗರದ ಪ್ರಮುಖ ಸಂಘಟನೆಗಳಲ್ಲಿ ಒಂದಾಗಿದೆ. ೬೫ನೇ ವರ್ಷದ ಪ್ರತಿಷ್ಠಾಪನಾ ಅಂಗವಾಗಿ ತಾಲೂಕು ಅರ್ಚಕರ ಮಹಾಸಭಾ ಅಧ್ಯಕ್ಷ ಎಸ್.ವಿ ರಾಮಾನುಜ ಅಯ್ಯಂಗಾರ್ ನೇತೃತ್ವದಲ್ಲಿ ಧಾರ್ಮಿಕ ಆಚರಣೆಗಳು ಜರುಗಿದವು. ಧಾರ್ಮಿಕ ಕಾರ್ಯಕ್ರಮದಲ್ಲಿ ವ್ಯಾಪಾರಸ್ಥರು, ವರ್ತಕರು, ಸ್ಥಳೀಯ ನಿವಾಸಿಗಳು ಸೇರಿದಂತೆ ನೂರಾರು ಮಂದಿ ಪಾಲ್ಗೊಂಡಿದ್ದರು. ಸಮಿತಿ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು.
No comments:
Post a Comment