Friday, October 14, 2022

ಪ್ರೊ. ಬಿ. ಕೃಷ್ಣಪ್ಪನವರ ಹೋರಾಟದ ದಾರಿ ಇಂದಿನ ಪೀಳಿಗೆಗೆ ಅವಶ್ಯಕ : ಬಿ.ಕೆ ಸಂಗಮೇಶ್ವರ್

ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ಭದ್ರಾವತಿ ತಾಲೂಕು ಶಾಖೆ ವತಿಯಿಂದ ಹಳೇನಗರದ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಶ್ರೀ ಅಕ್ಕಮಹಾದೇವಿ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರೊ. ಬಿ.ಕೃಷ್ಣಪ್ಪನವರ ೮೫ನೇ ಜನ್ಮದಿನ ಸಾಮಾಜಿಕ ನ್ಯಾಯದ ದಿನ ಹಾಗು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಿದರು.
    ಭದ್ರಾವತಿ, ಅ. ೧೪: ಶೋಷಿತರಪರವಾದ ಹೋರಾಟಗಳಿಗೆ ಧ್ವನಿಯಾಗಿ ನ್ಯಾಯ ಒದಗಿಸಿಕೊಟ್ಟ ಪ್ರೊ. ಬಿ. ಕೃಷ್ಣಪ್ಪನವರ ಹೋರಾಟದ ದಾರಿ ಇಂದಿನ ಯುವ ಪೀಳಿಗೆಗೆ ತಿಳಿಸಿಕೊಡುವ ಅನಿವಾರ್ಯತೆ ಇದೆ ಎಂದು ಶಾಸಕ ಬಿ.ಕೆ ಸಂಗಮೇಶ್ವರ್ ಹೇಳಿದರು.
    ಅವರು ಶುಕ್ರವಾರ ಕರ್ನಾಟಕ ದಲಿತ ಸಂಘರ್ಷ ಸಮಿತಿ(ಅಂಬೇಡ್ಕರ್ ವಾದ) ತಾಲೂಕು ಶಾಖೆ ವತಿಯಿಂದ ಹಳೇನಗರದ ಬಸವೇಶ್ವರ ವೃತ್ತದ ಸಮೀಪದಲ್ಲಿರುವ ಶ್ರೀ ಅಕ್ಕಮಹಾದೇವಿ ಸಮುದಾಯ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಪ್ರೊ. ಬಿ.ಕೃಷ್ಣಪ್ಪನವರ ೮೫ನೇ ಜನ್ಮದಿನ ಸಾಮಾಜಿಕ ನ್ಯಾಯದ ದಿನ ಹಾಗು ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಪ್ರೊ. ಬಿ. ಕೃಷ್ಣಪ್ಪನವರು ದಲಿತರ ಪರವಾದ ಹೋರಾಟಗಳಿಗೆ ಮುನ್ನುಡಿ ಬರೆದವರು. ದಲಿತರನ್ನು ಸಂಘಟಿಸಿ ರಾಜ್ಯಾದ್ಯಂತ ಹಲವಾರು ಚಳುವಳಿಗಳನ್ನು ರೂಪಿಸಿ ಅನ್ಯಾಯದ ವಿರುದ್ಧ ನ್ಯಾಯ ಒದಗಿಸಿಕೊಟ್ಟರು. ಇವರ ಹೋರಾಟಗಳು, ಆದರ್ಶತನಗಳು ಎಂದಿಗೂ ಮಾದರಿಯಾಗಿದ್ದು, ಇಂದಿನ ಯುವ ಪೀಳಿಗೆ ಇವರ ದಾರಿಯಲ್ಲಿ ಸಾಗುವಂತಾಗಬೇಕೆಂದರು.
    ಡಿಎಸ್‌ಎಸ್ ಜಿಲ್ಲಾ ಸಂಚಾಲಕ ಟಿ.ಎಚ್ ಹಾಲೇಶಪ್ಪ, ತಾಲೂಕು ಪ್ರಧಾನ ಸಂಚಾಲಕ ಎಂ. ಪಳನಿರಾಜ್, ಜೆಡಿಎಸ್ ಮುಖಂಡರಾದ ಶಾರದ ಅಪ್ಪಾಜಿ, ಬಿಜೆಪಿ ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್, ಪ್ರಮುಖರಾದ ಮಂಗೋಟೆ ರುದ್ರೇಶ್, ಬಸವರಾಜ್ ಬಿ. ಅನೇಕೊಪ್ಪ, ಮಹಾದೇವಸ್ವಾಮಿ, ಶೇಷಪ್ಪ, ಪುಟ್ಟರಾಜ್, ಗೋಕುಲ್‌ಕೃಷ್ಣನ್, ಆನಂದಪ್ಪ, ಗೋವಿಂದರಾಜು, ಹರೀಶ್, ಗೋಪಾಲಪ್ಪ, ರುದ್ರೇಶ್, ಪ್ರಭು, ನಿಂಗಣ್ಣ, ಮೂರ್ತಿ, ಕಲ್ಲೇಶಪ್ಪ ಮತ್ತು ಶಿವಕುಮಾರ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಅತಿಹೆಚ್ಚು ಅಂಕಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಲಾಯಿತು. ಇದಕ್ಕೂ ಮೊದಲು ಅಂಡರ್‌ಬ್ರಿಡ್ಜ್ ಬಳಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ನೆರವೇರಿಸಲಾಯಿತು.

No comments:

Post a Comment