ಸಯ್ಯದ್ ಇರ್ಫಾನ್ ಖಾದ್ರಿ
ಭದ್ರಾವತಿ, ಅ. ೧೫: ರಸ್ತೆ ಅಪಘಾತದಲ್ಲಿ ಹಳೇನಗರದ ಕೋಟೆ ಏರಿಯಾ ಖಾಜಿಮೊಹಲ್ಲಾ ನಿವಾಸಿ ಸಯ್ಯದ್ ಇರ್ಫಾನ್ ಖಾದ್ರಿ(೪೮) ಮೃತಪಟ್ಟಿದ್ದಾರೆ.
ದ್ವಿಚಕ್ರ ವಾಹನದಲ್ಲಿ ಶಿವಮೊಗ್ಗ ನಗರಕ್ಕೆ ತೆರಳುತ್ತಿದ್ದಾಗ ಹರಿಗೆ ಬಳಿ ಅಪಘಾತ ಸಂಭವಿಸಿದ್ದು, ತೀವ್ರ ಗಾಯಗೊಂಡಿದ್ದ ಇವರನ್ನು ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಇವರ ನಿಧನಕ್ಕೆ ನಗರದ ಅನೇಕ ಗಣ್ಯರು ಸಂತಾಪ ಸೂಚಿಸಿದ್ದಾರೆ.
No comments:
Post a Comment