Tuesday, October 25, 2022

ರಸ್ತೆ ಅಪಘಾತದಲ್ಲಿ ಮಹಿಳೆ ಮೃತ : ಅಂಗಾಂಗ ದಾನ


ಗಂಗಮ್ಮ
ಭದ್ರಾವತಿ, ಅ. ೨೫: ಆಕಸ್ಮಿಕವಾಗಿ ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಹಿಳೆಯೊಬ್ಬರ ಅಂಗಾಂಗಗಳನ್ನು ದಾನ ಮಾಡುವ ಮೂಲಕ ಕುಟುಂಬಸ್ಥರು ದುಃಖದಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಮಂಗಳವಾರ ನಡೆದಿದೆ.
      ತಾಲೂಕಿನ ಉಕ್ಕುಂದ ವ್ಯಾಪ್ತಿಯ ರತ್ನಾಪುರ ಗ್ರಾಮದ ನಿವಾಸಿ ಗಂಗಮ್ಮ(೫೫) ಅವರ ಅಂಗಾಂಗಗಳನ್ನು ದಾನ ಮಾಡಲಾಗಿದೆ. ಗಂಗಮ್ಮ ಅವರು ಪುತ್ರ ಶೇಖರ್ ಜೊತೆ ದ್ವಿಚಕ್ರ ವಾಹನದಲ್ಲಿ ನಗರಕ್ಕೆ ಆಗಮಿಸಿ ಪುನಃ ಹಿಂದಿರುಗಿ ಗ್ರಾಮಕ್ಕೆ ಮರಳುವಾಗ ತರೀಕೆರೆ ರಸ್ತೆಯ ರೈಲ್ವೆ ಮೇಲ್ಸೇತುವೆಯಲ್ಲಿ ರಸ್ತೆಗೆ ಕೆಳಗೆ ಬಿದ್ದು ತೀವ್ರ ಗಾಯಗೊಂಡಿದ್ದು, ತಕ್ಷಣ ಆಸ್ಪತ್ರೆಗೆ ದಾಖಲಿಸಲಾಯಿದಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
      ಗಂಗಮ್ಮ ಅವರು ಪತಿ, ಪುತ್ರ ಹಾಗು ಪುತ್ರಿಯನ್ನು ಹೊಂದಿದ್ದರು. ಹಳೇನಗರದ ತಾಲೂಕು ಸಾರ್ವಜನಿಕರ ಸರ್ಕಾರಿ ಆಸ್ಪತ್ರೆಯಲ್ಲಿ ಇವರ ಅಂಗಾಂಗಗಳನ್ನು ದಾನ ಮಾಡಲಾಯಿತು.
      ಪಿಡಬ್ಲ್ಯೂಡಿ ಇಲಾಖೆ ನಿರ್ಲಕ್ಷ್ಯತನ ಸಾವಿಗೆ ಕಾರಣ :
      ರೈಲ್ವೆ ಮೇಲ್ಸೇತುವೆ ರಸ್ತೆಯಲ್ಲಿ ದೊಡ್ಡ ಗಾತ್ರದ ಗುಂಡಿಯಾಗಿದ್ದು, ಈ ಗುಂಡಿಯನ್ನು ಮುಚ್ಚುವಂತೆ ಹಲವು ಬಾರಿ ಪಿಡಬ್ಲ್ಯೂಡಿ ಇಲಾಖೆ ಗಮನಕ್ಕೆ ತರಲಾಗಿದೆ. ಆದರೆ ಈ ಗುಂಡಿಯನ್ನು ಮುಚ್ಚುವಲ್ಲಿ ನಿರ್ಲಕ್ಷ್ಯತನ ವಹಿಸಿರುವ ಕಾರಣ ಈ ಅಪಘಾತ ಸಂಭವಿಸಿದೆ ಎಂದು ಉಕ್ಕುಂದ ಗ್ರಾಮದ ನಿವಾಸಿ, ಸಾಮಾಜಿಕ ಹೋರಾಟಗಾರ ಶಿವಕುಮಾರ್ ಆರೋಪಿಸಿದ್ದಾರೆ.

No comments:

Post a Comment