Tuesday, October 18, 2022

ಅ.೧೯ರಂದು ನೂತನ ಎರಡು ಯೋಜನಾ ಕಛೇರಿಗಳ ಉದ್ಘಾಟನೆ

    ಭದ್ರಾವತಿ, ಅ. ೧೮ : ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ವತಿಯಿಂದ ನೂತನ ಎರಡು ಯೋಜನಾ ಕಛೇರಿಗಳ ಉದ್ಘಾಟನೆ ಹಾಗು ವಿವಿಧ ಅನುದಾನಗಳ ವಿತರಣಾ ಸಮಾರಂಭ ಅ. ೧೯ರಂದು ಬೆಳಿಗ್ಗೆ ೧೦ ಗಂಟೆಗೆ ನಗರದ ಬಿ.ಎಚ್ ರಸ್ತೆ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಹಮ್ಮಿಕೊಳ್ಳಲಾಗಿದೆ.
    ಶಾಸಕ ಬಿ.ಕೆ ಸಂಗಮೇಶ್ವರ್ ಉದ್ಘಾಟಿಸಲಿದ್ದು, ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ ಅಧ್ಯಕ್ಷತೆ ವಹಿಸಲಿದ್ದಾರೆ. ಟ್ರಸ್ಟ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಎಲ್.ಎಚ್ ಮಂಜುನಾಥ್ ನಾಮಫಲಕ ಅನಾವರಣಗೊಳಿಸಲಿದ್ದು, ತಹಸೀಲ್ದಾರ್ ಆರ್. ಪ್ರದೀಪ್ ವಿವಿಧ ಅನುದಾನ ವಿತರಣೆ ಮಾಡಲಿದ್ದಾರೆ.
    ಜಿಲ್ಲಾ ಜನಜಾಗೃತಿ ವೇದಿಕೆ ಅಧ್ಯಕ್ಷ ಜಿ. ಆನಂದಕುಮಾರ್, ಸದಸ್ಯರಾದ ಜಯರಾಂ ಗೊಂದಿ, ಆರ್. ಕರುಣಾಮೂರ್ತಿ, ಪಾಲಾಕ್ಷಪ್ಪ, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ಎನ್ ಶ್ರೀಹರ್ಷ, ಯೋಜನೆ ಪ್ರಾದೇಶಿಕ ನಿರ್ದೇಶಕಿ ಬಿ. ಗೀತಾ, ತಾಲೂಕು ಯೋಜನಾಧಿಕಾರಿಗಳಾದ ವೈ. ಪ್ರಕಾಶ್ ನಾಯ್ಕ, ಮಾಧವ ಸೇರಿದಂತೆ ಇನ್ನಿತರರು ಉಪಸ್ಥಿತರಿರುವರು.

No comments:

Post a Comment