ಬೀದಿಬದಿ ವ್ಯಾಪಾರಿಗಳು, ಆಟೋ ಚಾಲಕರಿಂದ ರಕ್ಷಣೆ
ಭದ್ರಾವತಿ ನಗರಸಭೆ ವ್ಯಾಪ್ತಿಯ ಜನ್ನಾಪುರ ಜಯಶ್ರೀ ವೃತ್ತದಲ್ಲಿರುವ ವಾರ್ಡ್ ನಂ.೩೩ರ ನಗರಸಭೆ ಹೈಟೆಕ್ ಶೌಚಾಲಯದ ಗುಂಡಿಯಲ್ಲಿ ಎಮ್ಮೆ ಕರು ಸಿಕ್ಕಿ ಹಾಕಿಕೊಂಡು ಸಂಕಷ್ಟಕ್ಕೆ ಒಳಗಾದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಭದ್ರಾವತಿ, ಅ. ೭: ನಗರಸಭೆ ವ್ಯಾಪ್ತಿಯ ಜನ್ನಾಪುರ ಜಯಶ್ರೀ ವೃತ್ತದಲ್ಲಿರುವ ವಾರ್ಡ್ ನಂ.೩೩ರ ನಗರಸಭೆ ಹೈಟೆಕ್ ಶೌಚಾಲಯದ ಗುಂಡಿಯಲ್ಲಿ ಎಮ್ಮೆ ಕರು ಸಿಕ್ಕಿ ಹಾಕಿಕೊಂಡು ಸಂಕಷ್ಟಕ್ಕೆ ಒಳಗಾದ ಘಟನೆ ಶುಕ್ರವಾರ ಬೆಳಿಗ್ಗೆ ನಡೆದಿದೆ.
ಕೆಲವು ದಿನಗಳಿಂದ ಶೌಚಾಲಯದ ಗುಂಡಿಯಿಂದ ಕಲ್ಮಶಗೊಂಡ ನೀರು ಹೊರಬರುತ್ತಿದ್ದು, ಈ ಭಾಗದಲ್ಲಿ ದುರ್ವಾಸನೆ ಬರುತ್ತಿದ್ದರೂ ಸಹ ಈ ಬಗ್ಗೆ ಯಾರು ಸಹ ಗಮನ ಹರಿಸಿರಲಿಲ್ಲ. ಎಮ್ಮೆ ಕರು ಈ ಗುಂಡಿಯಲ್ಲಿ ಆಕಸ್ಮಿಕವಾಗಿ ಸಿಕ್ಕಿ ಹಾಕಿಕೊಂಡಿದ್ದು, ಹೊರಬರಲು ಸಾಧ್ಯವಾಗದೆ ಸಂಕಷ್ಟಕ್ಕೆ ಒಳಗಾಗಿದೆ. ಇದನ್ನು ಬೀದಿಬದಿ ವ್ಯಾಪಾರಿ, ಆಟೋ ಚಾಲಕರು ತಕ್ಷಣ ಎಮ್ಮೆಕರು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಎಮ್ಮೆಕರು ಪ್ರಾಣಾಪಾಯದಿಂದ ಪಾರಾಗಿದೆ.
ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿ ಮುಖಂಡ ಎಸ್.ಎಸ್ ಭೈರಪ್ಪ ನಗರಸಭೆ ಮಾಹಿತಿ ನೀಡಿದ್ದು, ತಕ್ಷಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದಾರೆ.
No comments:
Post a Comment