ಸುರಕ್ಷಾ ಸೇವಾ ಟ್ರಸ್ಟ್ ವತಿಯಿಂದ ಭದ್ರಾವತಿ ನಗರಸಭೆ ವ್ಯಾಪ್ತಿಯ ಸಿದ್ದಾಪುರದಲ್ಲಿರುವ ಸುರಕ್ಷಾ ವೃದ್ಧಾಶ್ರಮ ಮತ್ತು ಅನಾಥಾಶ್ರಮದಲ್ಲಿ ಭಾನುವಾರ ರಾಷ್ಟ್ರಪಿತ ಮಹಾತ್ಮಗಾಂಧಿ ಜಯಂತಿ ಆಚರಿಸಲಾಯಿತು.
ಭದ್ರಾವತಿ, ಅ. ೨ : ಸುರಕ್ಷಾ ಸೇವಾ ಟ್ರಸ್ಟ್ ವತಿಯಿಂದ ನಗರಸಭೆ ವ್ಯಾಪ್ತಿಯ ಸಿದ್ದಾಪುರದಲ್ಲಿರುವ ಸುರಕ್ಷಾ ವೃದ್ಧಾಶ್ರಮ ಮತ್ತು ಅನಾಥಾಶ್ರಮದಲ್ಲಿ ಭಾನುವಾರ ರಾಷ್ಟ್ರಪಿತ ಮಹಾತ್ಮಗಾಂಧಿ ಜಯಂತಿ ಆಚರಿಸಲಾಯಿತು.
ಕಾರ್ಯಕ್ರಮದಲ್ಲಿ ಸುರಕ್ಷಾ ಸೇವಾ ಟ್ರಸ್ಟ್ ಅಧ್ಯಕ್ಷೆ ಜ್ಯೋತಿ ಸೋಮಶೇಖರ್ ರವರು ಮಾತನಾಡಿ, ಹಿರಿಯರನ್ನು ಗೌರವಿಸಿ ಮನೆಯಿಂದ ಹೊರಗೆ ಹಾಕಬೇಡಿ. ವೃದ್ಧಾಪ್ಯದಲ್ಲಿ ಹೆಚ್ಚಿನ ಆರೈಕೆ ಅವಶ್ಯಕವಾಗಿದ್ದು, ಈ ನಿಟ್ಟಿನಲ್ಲಿ ಗಮನ ಹರಿಸಿ. ಸಮಾಜದಲ್ಲಿ ಮಹಿಳೆಯರು ಇನ್ನೂ ಹೆಚ್ಚಿನ ರೀತಿಯಲ್ಲಿ ಸಬಲೀಕರಣಗೊಳ್ಳಬೇಕು ಎಂದರು.
ಸುರಕ್ಷಾ ವೃದ್ಧಾಶ್ರಮ ಕಾರ್ಯದರ್ಶಿ ಸೋಮಶೇಖರ್, ಖಜಾಂಚಿ ಪ್ರಶಾಂತ್, ಟ್ರಸ್ಟಿ ಅನಿತಾ ಆರ್. ಗಿರಿ, ಮಂಜುಳಮ್ಮ. ಪುನೀತ್. ಭಾಗ್ಯ, ಮಂಜುಳಾ ಸೇರಿದಂತೆ ವೃದ್ಧಾಶ್ರಮದ ವೃದ್ಧರು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
No comments:
Post a Comment