Friday, October 7, 2022

ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ಜಿಲ್ಲಾಧ್ಯಕ್ಷರಾಗಿ ಸಿದ್ದಲಿಂಗಯ್ಯ ನೇಮಕ

ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ಜಿಲ್ಲಾಧ್ಯಕ್ಷರಾಗಿ ಭದ್ರಾವತಿ ಸಿದ್ದರೂಢನಗರದ ನಿವಾಸಿ ಸಿದ್ದಲಿಂಗಯ್ಯ ನೇಮಕಗೊಂಡಿದ್ದಾರೆ. 
    ಭದ್ರಾವತಿ, ಅ. ೭ : ಕರ್ನಾಟಕ ರಾಜ್ಯ ಸರ್ಕಾರಿ ಪಡಿತರ ವಿತರಕರ ಸಂಘದ ಜಿಲ್ಲಾಧ್ಯಕ್ಷರಾಗಿ ಸಿದ್ದರೂಢನಗರದ ನಿವಾಸಿ ಸಿದ್ದಲಿಂಗಯ್ಯ ನೇಮಕಗೊಂಡಿದ್ದಾರೆ.
    ಸಂಘದ ರಾಜ್ಯಾಧ್ಯಕ್ಷ ಟಿ. ಕೃಷ್ಣಪ್ಪ ಅಧ್ಯಕ್ಷತೆಯಲ್ಲಿ ಶುಕ್ರವಾರ ಬೆಂಗಳೂರಿನಲ್ಲಿ ನಡೆದ ಸಭೆಯಲ್ಲಿ ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ ಸಿದ್ದಲಿಂಗಯ್ಯ ಅವರನ್ನು ಅವಿರೋಧವಾಗಿ ಆಯ್ಕೆಮಾಡಲಾಯಿತು ಎಂದು ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಚನ್ನಕೇಶವೇಗೌಡ ತಿಳಿಸಿದ್ದಾರೆ.
    ಸಿದ್ದಲಿಂಗಯ್ಯ ಪ್ರಸ್ತುತ ರಾಜ್ಯ ಸಂಘಟನಾ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸುತ್ತಿದ್ದರು. ಇದಕ್ಕೂ ಮೊದಲು ಹಲವಾರು ವರ್ಷ ತಾಲೂಕು ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.
    ಮೂಲತಃ ಸಿದ್ದಲಿಂಗಯ್ಯ ಸಮಾಜ ಸೇವಕರಾಗಿ ಗುರುತಿಸಿಕೊಂಡಿದ್ದು, ವಿವಿಧ ಸಂಘಟನೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ. ಇವರಿಗೆ ಜಿಲ್ಲಾ ಸಂಘದ ಪದಾಧಿಕಾರಿಗಳು, ತಾಲೂಕು ಅಧ್ಯಕ್ಷರು, ಪದಾಧಿಕಾರಿಗಳು ಹಾಗು ಪಡಿತರ ವಿತರಕರು ಅಭಿನಂದಿಸಿದ್ದಾರೆ.

No comments:

Post a Comment