Sunday, October 9, 2022

ಸಾಂಸ್ಕೃತಿಕ ವಿಭಿನ್ನತೆ ಕೇರಳ ಸಮಾಜದವರ ವಿಶಿಷ್ಟತೆ : ಬಿ.ವೈ ರಾಘವೇಂದ್ರ

ಭದ್ರಾವತಿ ಬಿ.ಎಚ್ ರಸ್ತೆ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಕೇರಳ ಸಮಾಜಂ ಮತ್ತು ಮಹಿಳಾ ವಿಭಾಗಂ ಹಾಗು ಯೂತ್ ವಿಂಗ್ಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೧೦ನೇ ವರ್ಷದ ಓಣಂ ದಿನಾಚರಣೆ ಸಂಸದ ಬಿ.ವೈ ರಾಘವೇಂದ್ರ, ಶಾಸಕ ಬಿ.ಕೆ ಸಂಗಮೇಶ್ವರ್ ಸೇರಿದಂತೆ ಇನ್ನಿತರರು ಅಕಿಉದ್ಘಾಟಿಸಿದರು.
    ಭದ್ರಾವತಿ, ಅ. ೯: ಕೇರಳ ಸಮಾಜದವರು ಸಾಂಸ್ಕೃತಿಕವಾಗಿ ವಿಭಿನ್ನತೆಯನ್ನು ಹೊಂದಿದ್ದು, ಆ ಮೂಲಕ ದೇಶದೆಲ್ಲೆಡೆ ಗುರುತಿಸಿಕೊಂಡಿದ್ದಾರೆಂದು ಸಂಸದ ಬಿ.ವೈ ರಾಘವೇಂದ್ರ ಹೇಳಿದರು.
    ಅವರು ಭಾನುವಾರ ಬಿ.ಎಚ್ ರಸ್ತೆ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಕೇರಳ ಸಮಾಜಂ ಮತ್ತು ಮಹಿಳಾ ವಿಭಾಗಂ ಹಾಗು ಯೂತ್ ವಿಂಗ್ಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೧೦ನೇ ವರ್ಷದ ಓಣಂ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು.
    ಓಣಂ ದಿನಾಚರಣೆ ಮೂಲಕ ಅವರ ಸಂಸ್ಕೃತಿ, ಕಲೆ, ವಿಭಿನ್ನತೆಗಳು ಅನಾವರಣಗೊಳಿಸುವ ಮೂಲಕ ವಿಶಿಷ್ಟತೆಯನ್ನು ಕಾಯ್ದುಕೊಂಡು ಬರುತ್ತಿದ್ದಾರೆ. ಸಮಾಜದಲ್ಲಿ ಎಲ್ಲರೊಂದಿಗೆ ವಿಶ್ವಾಸಾರ್ಹತೆ ಕಾಯ್ದುಕೊಂಡಿದ್ದಾರೆ. ಈ ಸಮಾಜಕ್ಕೆ ಅಗತ್ಯವಿರುವ ನಿವೇಶನ ಕೊಡಿಸಲು ಬದ್ಧವಾಗಿರುವುದಾಗಿ ಭರವಸೆ ನೀಡಿದರು.
    ಕಾರ್ಯಕ್ರಮದ ನೇತೃತ್ವವಹಿಸಿದ್ದ ಶಾಸಕ ಬಿ.ಕೆ ಸಂಗಮೇಶ್ವರ್ ಮಾತನಾಡಿ, ಕೇರಳ ಸಮಾಜದವರು ಎಲ್ಲಾ ರಂಗದಲ್ಲೂ ಮುಂಚೂಣಿಯಲ್ಲಿದ್ದಾರೆ. ಛಲ ಹಾಗು ಶ್ರಮದ ಬದುಕಿನಿಂದ ದೇಶದ ಮೂಲೆ ಮೂಲೆಗಳಲ್ಲಿ ಹಾಗು ಪ್ರಪಂಚದಾದ್ಯಂತ ತಮ್ಮ ಅಸ್ತಿತ್ವ ಕೊಂಡಿದ್ದಾರೆಂದು ಪ್ರಶಂಸೆ ವ್ಯಕ್ತಪಡಿಸಿದರು.
ಕಾರ್ಯಕ್ರಮದಲ್ಲಿ ಆಹಾರ ಆರೋಗ್ಯ ಕುರಿತು ಡಾ. ಪ್ರವೀಣ್ ಉಪನ್ಯಾಸ ನೀಡಿದರು. ಅತಿಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು. ಕೇರಳ ಸಮಾಜಂ ಅಧ್ಯಕ್ಷ ಗಂಗಾಧರ ಅಧ್ಯಕ್ಷತೆ ವಹಿಸಿದ್ದರು.
    ಅರಣ್ಯ ಅಭಿವೃದ್ಧಿ ನಿಗಮದ ನಿರ್ದೇಶಕ ಎನ್.ಡಿ ಸತೀಶ್, ಬಿಜೆಪಿ ಮುಖಂಡರಾದ ಎಸ್. ಕುಮಾರ್, ಜಿ. ಧರ್ಮಪ್ರಸಾದ್, ಕೇರಳ ಸಮಾಜಂ ಪ್ರಮುಖರಾದ ಉಡುಪಿ ಸುಗುಣ ಕುಮಾರ್, ಇಬ್ರಾಹಿಂ, ಕೇರಳ ಸಮಾಜಂ ಮಹಿಳಾ ವಿಭಾಗಂ ಅಧ್ಯಕ್ಷೆ ವಿಜಯಲಕ್ಷ್ಮೀ, ಯೂತ್ ವಿಂಗ್ಸ್ ಅಧ್ಯಕ್ಷ ಪ್ರಸನ್ನ ಕುಮಾರ್, ಕೇರಳ ಸಮಾಜಂ ಪ್ರಧಾನ ಕಾರ್ಯದರ್ಶಿ ಸುರೇಶ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
    ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ತಾಲೂಕಿನ ವಿವಿಧೆಡೆಗಳಿಂದ ಜಾತಿ, ಬೇಧ-ಭಾವವಿಲ್ಲದೆ ಹಿಂದೂ, ಕ್ರೈಸ್ತ, ಮುಸ್ಲಿಂ ಸಮುದಾಯದ ಮಲಯಾಳಿ ಭಾಷಿಕರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಗಮನ ಸೆಳೆದರು.


ಭದ್ರಾವತಿ ಬಿ.ಎಚ್ ರಸ್ತೆ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ಕೇರಳ ಸಮಾಜಂ ಮತ್ತು ಮಹಿಳಾ ವಿಭಾಗಂ ಹಾಗು ಯೂತ್ ವಿಂಗ್ಸ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೧೦ನೇ ವರ್ಷದ ಓಣಂ ದಿನಾಚರಣೆಯಲ್ಲಿ ಅತಿಹೆಚ್ಚು ಅಂಕ ಪಡೆದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಅಭಿನಂದಿಸಲಾಯಿತು

No comments:

Post a Comment