ಭದ್ರಾವತಿ, ಅ. ೮ : ನಗರದ ಕೇರಳ ಸಮಾಜಂ ಮತ್ತು ಮಹಿಳಾ ವಿಭಾಗಂ ಹಾಗು ಯೂತ್ ವಿಂಗ್ಸ್ ವತಿಯಿಂದ ಅ.೯ರ ಭಾನುವಾರ ಬೆಳಿಗ್ಗೆ ೧೦ ಗಂಟೆಗೆ ಬಿ.ಎಚ್ ರಸ್ತೆ ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪದಲ್ಲಿ ೧೦ನೇ ವರ್ಷದ ಓಣಂ ದಿನಾಚರಣೆ ಹಮ್ಮಿಕೊಳ್ಳಲಾಗಿದೆ.
ಕೇರಳ ಸಮಾಜಂ ವತಿಯಿಂದ ಪ್ರತಿ ವರ್ಷ ಓಣಂ ಆಚರಣೆ ವಿಜೃಂಭಣೆಯಿಂದ ನಡೆಯುತ್ತಿದ್ದು, ಜನಪ್ರತಿನಿಧಿಗಳು, ವಿವಿಧ ಸಂಘ-ಸಂಸ್ಥೆಗಳ ಪ್ರಮುಖರು, ಗಣ್ಯರು ಉಪಸ್ಥಿತರಿರುವರು. ಕೇರಳ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸುವಂತೆ ಪ್ರಧಾನ ಕಾರ್ಯದಶಿಶ ಜಿ. ಸುರೇಶ್ ಕೋರಿದ್ದಾರೆ.
No comments:
Post a Comment