ಭದ್ರಾವತಿ ನ್ಯೂಟೌನ್ ತರಂಗ ಕಿವುಡು ಮಕ್ಕಳ ಪ್ರಾಥಮಿಕ ಹಾಗು ಪ್ರೌಢಶಾಲೆಯ ಆವರಣದಲ್ಲಿ ಶ್ರೀ ಕನಕ ಪತ್ತಿನ ಸಹಕಾರ ಸಂಘ ನಿಯಮಿತದಿಂದ ಕನಕ ಜಯಂತಿ ಅಂಗವಾಗಿ ಸಸಿ ನೆಡುವ ಮೂಲಕ ಮಕ್ಕಳು ಮತ್ತು ಸಿಬ್ಬಂದಿಗಳಿಗೆ ಸಿಹಿ ಹಂಚಿ, ಹಣ್ಣು ವಿತರಿಸಲಾಯಿತು.
ಭದ್ರಾವತಿ, ನ. ೧೨: ದಾಸ ಶ್ರೇಷ್ಠ ಕನಕದಾಸರ ಜಯಂತ್ಯೋತ್ಸವದ ಅಂಗವಾಗಿ ಶನಿವಾರ ನಗರದ ಹೊಸಸೇತುವೆ ರಸ್ತೆಯಲ್ಲಿ ಶ್ರೀ ಕನಕ ಪತ್ತಿನ ಸಹಕಾರ ಸಂಘ ನಿಯಮಿತದಿಂದ ಸಿಹಿ ಮತ್ತು ಹಣ್ಣು ವಿತರಿಸಲಾಯಿತು.
ನ್ಯೂಟೌನ್ ತರಂಗ ಕಿವುಡು ಮಕ್ಕಳ ಪ್ರಾಥಮಿಕ ಹಾಗು ಪ್ರೌಢಶಾಲೆಯ ಆವರಣದಲ್ಲಿ ಸಸಿ ನೆಡುವ ಮೂಲಕ ಮಕ್ಕಳು ಮತ್ತು ಸಿಬ್ಬಂದಿಗಳಿಗೆ ಸಿಹಿ ಹಂಚಿ, ಹಣ್ಣು ವಿತರಿಸಲಾಯಿತು.
ಸಿದ್ದಾರ್ಥ ಅಂಧರ ಕೇಂದ್ರದ ಅಂಧ ವಿಕಲಚೇತನರಿಗೆ ಹಾಗು ಸಿಬ್ಬಂದಿಗಳಿಗೆ ಸಿಹಿ ಹಂಚಿ, ಹಣ್ಣು ವಿತರಿಸುವ ಮೂಲಕ ಕನಕದಾಸರ ಜಯಂತ್ಯೋತ್ಸವ ಶುಭ ಕೋರಲಾಯಿತು.
ಶ್ರೀ ಕನಕ ಪತ್ತಿನ ಸಹಕಾರ ಸಂಘದ ನಿರ್ದೇಶಕರಾದ ಡಿ. ಪ್ರಭಾಕರ ಬೀರಯ್ಯ, ವೈ. ನಟರಾಜ್, ತಾಲೂಕು ಕುರುಬರ ಸಂಘದ ನಿರ್ದೇಶಕರಾದ ಕೆ. ಕೇಶವ, ಮಂಜುನಾಥ್(ಕೊಯ್ಲಿ), ಪ್ರಮುಖರಾದ ಹನುಮಂತು, ಷಣ್ಮುಖ, ಉಮೇಶ್, ಸತ್ಯನಾರಾಯಣ ಕೋಡಿಹಳ್ಳಿ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.
ಭದ್ರಾವತಿ ಸಿದ್ದಾರ್ಥ ಅಂಧರ ಕೇಂದ್ರದ ಅಂಧ ವಿಕಲಚೇತನರಿಗೆ ಹಾಗು ಸಿಬ್ಬಂದಿಗಳಿಗೆ ಶ್ರೀ ಕನಕ ಪತ್ತಿನ ಸಹಕಾರ ಸಂಘ ನಿಯಮಿತದಿಂದ ಸಿಹಿ ಹಂಚಿ, ಹಣ್ಣು ವಿತರಿಸುವ ಮೂಲಕ ಕನಕದಾಸರ ಜಯಂತ್ಯೋತ್ಸವ ಶುಭ ಕೋರಲಾಯಿತು
No comments:
Post a Comment