Monday, November 7, 2022

ಇಂಟರ್ ಸಿಬಿಎಸ್‌ಇ ಸ್ಕೂಲ್ ಅಥ್ಲೆಟಿಕ್ ಮೀಟ್‌ನಲ್ಲಿ ಬಿಜಿಎಸ್ ಶಾಲೆ ವಿದ್ಯಾರ್ಥಿಗಳಿಗೆ ಬಹುಮಾನ

ಶಿವಮೊಗ್ಗ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಇಂಟರ್ ಸಿಬಿಎಸ್‌ಇ ಸ್ಕೂಲ್ ಅಥ್ಲೆಟಿಕ್ ಮೀಟ್ ೧೪ ವರ್ಷದೊಳಗಿನ ವಯೋಮಾನದ ಕ್ರೀಡಾಕೂಟದಲ್ಲಿ ತಾಲೂಕಿನ ಕಾರೇಹಳ್ಳಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಕೇಂದ್ರೀಯ ವಿದ್ಯಾಲಯ(ಬಿಜಿಎಸ್) ಶಾಲೆಯ ಮಕ್ಕಳು ಭಾಗವಹಿಸಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿಕೊಂಡಿದ್ದಾರೆ.
    ಭದ್ರಾವತಿ, ನ. ೭ : ಶಿವಮೊಗ್ಗ ಪೋದಾರ್ ಇಂಟರ್ ನ್ಯಾಷನಲ್ ಸ್ಕೂಲ್ ವತಿಯಿಂದ ಸಹ್ಯಾದ್ರಿ ಸಹೋದಯ ಸ್ಕೂಲ್ ಕಾಂಪ್ಲೆಕ್ಸ್ ಸಹಕಾರದೊಂದಿಗೆ ನೆಹರು ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದ್ದ ಇಂಟರ್ ಸಿಬಿಎಸ್‌ಇ ಸ್ಕೂಲ್ ಅಥ್ಲೆಟಿಕ್ ಮೀಟ್ ೧೪ ವರ್ಷದೊಳಗಿನ ವಯೋಮಾನದ ಕ್ರೀಡಾಕೂಟದಲ್ಲಿ ತಾಲೂಕಿನ ಕಾರೇಹಳ್ಳಿ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಕೇಂದ್ರೀಯ ವಿದ್ಯಾಲಯ(ಬಿಜಿಎಸ್) ಶಾಲೆಯ ಮಕ್ಕಳು ಭಾಗವಹಿಸಿ ಪ್ರಶಸ್ತಿಗಳನ್ನು ತಮ್ಮದಾಗಿಸಿಕೊಂಡಿಕೊಂಡಿದ್ದಾರೆ.
    ೮ನೇ ತರಗತಿ ವಿದ್ಯಾರ್ಥಿಗಳಾದ ಜಸ್ವಂತ್ ರೆಡ್ಡಿ ಉದ್ದ ಜಿಗಿತ ಹಾಗು ೨೦೦ ಮೀಟರ್ ಓಟದಲ್ಲಿ ಪ್ರಥಮ, ವೇದಾಂತ್ ಬಿ.ಎಂ ಗುಂಡು ಎಸೆತದಲ್ಲಿ ದ್ವಿತೀಯ, ಸಮರ್ಥ್ ಚಕ್ರವರ್ತಿ ೧೦೦ ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಹಾಗು ಬಾಲಕರ ವಿಭಾಗದ ರಿಲೇ ಸಮರ್ಥ್ ಚಕ್ರವರ್ತಿ ಮತ್ತು ಜಸ್ವಂತ್ ರೆಡ್ಡಿ ಹಾಗು ೭ನೇ ತರಗತಿ ವಿದ್ಯಾರ್ಥಿಗಳಾದ ಕಾರ್ತಿಕ್ ರೆಡ್ಡಿ ಮತ್ತು ಶ್ರೀಧರ್ ಹಾಗು ಬಾಲಕಿಯರ ವಿಭಾಗದಲ್ಲಿ ೭ನೇ ತರಗತಿ ವಿದ್ಯಾರ್ಥಿನಿಯರಾದ ಕೆ. ಬಿಂದು, ಎಸ್. ಹರ್ಷಿತ, ಆರ್. ಶ್ರೇಯ ಮತ್ತು ೮ನೇ ತರಗತಿ ವಿದ್ಯಾರ್ಥಿನಿ ತನಿಷಾ ತೃತೀಯ ಬಹುಮಾನ ಪಡೆದುಕೊಂಡಿದ್ದಾರೆ. ಜಸ್ವಂತ್ ರೆಡ್ಡಿ ಕ್ರೀಡಾಕೂಟ ಸಮಗ್ರ ಬಹುಮಾನ ಪಡೆದುಕೊಂಡು ಕೀರ್ತಿ ತಂದಿದ್ದಾರೆ.
    ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರಾದ ಎಲ್. ವೆಂಕಟೇಶ್ ನಾಯ್ಕ್, ಪ್ರಭಾಕರನ್ ಮತ್ತು ಭಾಗ್ಯಶ್ರೀ ವಿದ್ಯಾರ್ಥಿಗಳಿಗೆ ಹೆಚ್ಚಿನ ತರಬೇತಿ ನೀಡುವ ಮೂಲಕ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆಗೆ ಕಾರಣಕರ್ತರಾಗಿದ್ದು, ಕ್ರೀಡಾಕೂಟದಲ್ಲಿ ಪಾಲ್ಗೊಂಡು ಪ್ರಶಸ್ತಿ ತಮ್ಮದಾಗಿಸಿಕೊಂಡಿರುವ ವಿದ್ಯಾರ್ಥಿಗಳನ್ನು ಹಾಗು ದೈಹಿಕ ಶಿಕ್ಷಕರನ್ನು ಶಾಲಾ ಆಡಳಿತ ಮಂಡಳಿ ಅಭಿನಂದಿಸಿದೆ.  

No comments:

Post a Comment