Wednesday, November 2, 2022

ಕೇರಳ ಸಮಾಜಂ ವತಿಯಿಂದ ೬೭ನೇ ಕನ್ನಡ ರಾಜ್ಯೋತ್ಸವ

ಪ್ರತಿ ವರ್ಷದಂತೆ ಈ ಬಾರಿ ಸಹ ಭದ್ರಾವತಿಯಲ್ಲಿ ಕೇರಳ ಸಮಾಜಂ ವತಿಯಿಂದ ೬೭ನೇ ಕನ್ನಡ ರಾಜ್ಯೋತ್ಸವ ಅಚರಿಸಲಾಯಿತು.
    ಭದ್ರಾವತಿ, ನ. ೨: ಪ್ರತಿ ವರ್ಷದಂತೆ ಈ ಬಾರಿ ಸಹ ಕೇರಳ ಸಮಾಜಂ ವತಿಯಿಂದ ೬೭ನೇ ಕನ್ನಡ ರಾಜ್ಯೋತ್ಸವ ಅಚರಿಸಲಾಯಿತು.
      ನಗರದಲ್ಲಿ ಕೇರಳ ಸಮಾಜಂ ವಿಶೇಷವಾಗಿ ಗುರುತಿಸಿಕೊಂಡಿದ್ದು, ಅದರಲ್ಲೂ ಪ್ರತಿವರ್ಷ ಓಣಂ ಆಚರಣೆ ಮೂಲಕ ಎಲ್ಲರ ಗಮನ ಸೆಳೆಯುತ್ತಿದೆ. ಕನ್ನಡ ರಾಜ್ಯೋತ್ಸವ ಅಂಗವಾಗಿ ಜನ್ನಾಪುರದಲ್ಲಿರುವ ಸಮಾಜಂ ಕಛೇರಿ ಕಟ್ಟಡದಲ್ಲಿ ಧ್ವಜಾರೋಹಣ ನೆರವೇರಿಸಲಾಯಿತು.
       ಸಮಾಜಂ ಅಧ್ಯಕ್ಷ ಗಂಗಾಧರ್, ಉಪಾಧ್ಯಕ್ಷ ವಿ.ಕೆ ಮಾಹಿನ್, ಪ್ರಧಾನ ಕಾರ್ಯದರ್ಶಿ ಜಿ. ಸುರೇಶ್, ಖಂಚಾಚಿ ಎ. ಚಂದ್ರಶೇಖರ್, ಸಲಹೆಗಾರಾದ ಸುಕುಮಾರನ್ ಹಾಗೂ ಸದಸ್ಯರಾದ ರಾಧಾಕೃಷ್ಣನ್, ಸತ್ಯನಾರಾಯಣ, ಕೆ.ಸಿ ರಾಜಶೇಖರ್, ಮಹಿಳಾ ವಿಭಾಗಂ ಪ್ರಧಾನ ಕಾರ್ಯದರ್ಶಿ ಕಲ್ಯಾಣಿ ಶಶಿಧರನ್ ಹಾಗೂ ಜಂಟಿ ಕಾರ್ಯದರ್ಶಿ ರೇಖಾ ಚಂದ್ರನ್, ಯೂತ್ ವಿಂಗ್ಸ್ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಅಪ್ಪು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment