ಭದ್ರಾವತಿ ಹಳೇನಗರದ ರಾಘವೇಂದ್ರ ಸ್ವಾಮಿ ಮಠದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ಆಶ್ಲೇಷ ಬಲಿ ಬುಧವಾರ ವಿಜೃಂಭಣೆಯಿಂದ ಜರುಗಿತು.
ಭದ್ರಾವತಿ,ನ.೧೬ : ಹಳೇನಗರದ ರಾಘವೇಂದ್ರ ಸ್ವಾಮಿ ಮಠದಲ್ಲಿ ಪ್ರತಿವರ್ಷದಂತೆ ಈ ಬಾರಿ ಸಹ ಆಶ್ಲೇಷ ಬಲಿ ಬುಧವಾರ ವಿಜೃಂಭಣೆಯಿಂದ ಜರುಗಿತು.
ಗುರುರಾಜ ಸೇವಾ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಆಶ್ಲೇಷ ಬಲಿ ಧಾರ್ಮಿಕ ಆಚರಣೆಗಳು ಪ್ರಮೋದ್ ಕುಮಾರ್, ಪವನ್ ಕುಮಾರ್ ಮತ್ತು ಅಮೃತ್ ಸಂಗಡಿಗರಿಂದ ಜರುಗಿದವು.
ಶಾಸಕ ಬಿ.ಕೆ ಸಂಗಮೇಶ್ವರ್, ಲೆಕ್ಕ ಪರಿಶೋಧಕಿ ಚಂದ್ರಿಕಾ ಶ್ರೀಪಾದ್, ಹೇಮಂತ್ ಕುಮಾರ್, ಸತೀಶ್ ಅಯ್ಯರ್, ಚೇತನ್, ಮಂಜುನಾಥ್ ಹಾಗೂ ಸತ್ಯನಾರಾಯಣ್ ರಾವ್, ಗುರುರಾಜ ಸೇವಾ ಸಮಿತಿ ಅಧ್ಯಕ್ಷ ಮುರಳಿಧರ ತಂತ್ರಿ, ಉಪಾಧ್ಯಕ್ಷೆ ಸುಮಾರ ರಾಘವೇಂದ್ರ, ಪ್ರಧಾನ ಕಾರ್ಯದರ್ಶಿ ರಮಾಕಾಂತ್, ಖಜಾಂಚಿ ನಿರಂಜನಾಚಾರ್ಯ, ಗೋಪಾಲಾಚಾರ್, ಸತ್ಯನಾರಾಯಣಚಾರ್ ಸೇರಿದಂತೆ ಸುತ್ತಮುತ್ತಲ ಪ್ರದೇಶಗಳ ಭಕ್ತಾಧಿಗಳು ಪಾಲ್ಗೊಂಡಿದ್ದರು.
No comments:
Post a Comment