ಎನ್. ಗೋವಿಂದಪ್ಪ
ಭದ್ರಾವತಿ, ನ. ೫: ಯಾದವ ಸಮಾಜದ ಪ್ರಮುಖರು, ತಾಲೂಕು ಮಂಡಲ ಅಧ್ಯಕ್ಷ ಜಿ. ಧರ್ಮಪ್ರಸಾದ್ ಅವರ ತಂದೆ ಎನ್. ಗೋವಿಂದಪ್ಪ(೮೨) ನಿಧನ ಹೊಂದಿದರು.
ಓರ್ವ ಪುತ್ರಿ, ಇಬ್ಬರು ಪುತ್ರರು ಹಾಗು ಮೊಮ್ಮಕ್ಕಳನ್ನು ಹೊಂದಿದ್ದರು. ಗೋವಿಂದಪ್ಪರವರು ಯಾದವ ಸಮಾಜದ ಸಂಸ್ಥಾಪಕ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು. ಇವರ ಅಂತ್ಯಕ್ರಿಯೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ರಾಮಗಿರಿ ಹೋಬಳಿ ಗೌಡಿಹಳ್ಳಿಯಲ್ಲಿ ಭಾನುವಾರ ನಡೆಯಲಿದೆ.
ಗೋವಿಂದಪ್ಪನವರ ನಿಧನಕ್ಕೆ ಬಿಜೆಪಿ ಪ್ರಮುಖರು, ಯಾದವ ಸಮಾಜ ಸೇರಿದಂತೆ ವಿವಿಧ ಸಮಾಜಗಳ ಅಧ್ಯಕ್ಷರು, ಪದಾಧಿಕಾರಿಗಳು, ಗಣ್ಯರು ಸಂತಾಪ ಸೂಚಿಸಿದ್ದಾರೆ.
No comments:
Post a Comment