ಎಸ್.ಕೆ ಬಸವರಾಜು
ಭದ್ರಾವತಿ, ನ. ೧೬ : ನಗರಸಭೆ ವ್ಯಾಪ್ತಿ ಅಪ್ಪರ್ ಹುತ್ತಾ ನಿವಾಸಿ, ಶ್ರೀ ನಂದಿ ಈಶ್ವರ ದೇವಸ್ಥಾನ ಸಮಿತಿ ಸಂಸ್ಥಾಪಕ ಟ್ರಸ್ಟಿ ಎಸ್.ಕೆ ಬಸವರಾಜು(೬೬) ನಿಧನ ಹೊಂದಿದರು.
ಪತ್ನಿ, ಇಬ್ಬರು ಗಂಡು ಮಕ್ಕಳನ್ನು ಹೊಂದಿದ್ದರು. ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತರ ಅಂತ್ಯಸಂಸ್ಕಾರ ಬುಧವಾರ ನೆರವೇರಿತು.
ಮೂಲತಃ ಮಂಡ್ಯ ಜಿಲ್ಲೆ ಶ್ಯಾನ್ಬೋಗನ ಹಳ್ಳಿಯವರಾದ ಬಸವರಾಜು ಕಾಂಗ್ರೆಸ್ ಪಕ್ಷದಲ್ಲಿ ಗುರುತಿಸಿಕೊಂಡಿದ್ದರು. ಈ ಹಿಂದೆ ನಗರಸಭೆ ಚುನಾವಣೆಗೆ ಸ್ಪರ್ಧಿಸಿದ್ದರು.
ಇವರ ನಿಧನಕ್ಕೆ ಶಾಸಕ ಬಿ.ಕೆ ಸಂಗಮೇಶ್ವರ್, ಕಾಂಗ್ರೆಸ್ ಪಕ್ಷದ ನಗರ ಘಟಕದ ಅಧ್ಯಕ್ಷ ಟಿ. ಚಂದ್ರೇಗೌಡ, ಶ್ರೀ ನಂದಿ ಈಶ್ವರ ದೇವಸ್ಥಾನ ಸಮಿತಿ, ಪ್ರಮುಖರಾದ ಸಿದ್ದಲಿಂಗಯ್ಯ ಸೇರಿದಂತೆ ಸ್ಥಳೀಯ ಮುಖಂಡರು ಸಂತಾಪ ಸೂಚಿಸಿದ್ದಾರೆ.
No comments:
Post a Comment