ಪ.ಪೂ ದತ್ತಾವಧೂತ ಮಹಾರಾಜರು
ಭದ್ರಾವತಿ, ನ. ೨೯: ನಗರದ ಬಿ.ಎಚ್ ರಸ್ತೆ ಲೋಯರ್ ಹುತ್ತಾದಲ್ಲಿರುವ ಶ್ರೀ ಚಂಡಿಕಾದುರ್ಗಾ ದೇವಸ್ಥಾನದಲ್ಲಿ ಹಮ್ಮಿಕೊಳ್ಳಲಾಗಿರುವ ಉಪಾಸನಾ ಹಾಗು ನಾಮಸಾಧನಾ ಅಭ್ಯಾಸ ಶಿಬಿರದ ಸಮಾರಂಭಕ್ಕೆ ಡಿ.೩ರಂದು ಶ್ರೀ ಕ್ಷೇತ್ರ ಹೆಬ್ಬಳ್ಳಿಯಿಂದ ಪ.ಪೂ ದತ್ತಾವಧೂತ ಮಹಾರಾಜರು ಆಗಮಿಸಲಿದ್ದಾರೆ.
ಅಂದು ಸಂಜೆ ೬ ಗಂಟೆಗೆ ಶ್ರೀ ಮಹಾರಾಜರ ದಿವ್ಯ ಪಾದುಕೆಗಳೊಂದಿಗೆ ಪ.ಪೂ ದತ್ತಾವಧೂತ ಮಹಾರಾಜರು ಹಾಗು ಆಶ್ರಮ ವಾಸಿಗಳು ಆಗಮಿಸಲಿದ್ದಾರೆ. ಆರತಿ ಮಂತ್ರಪುಷ್ಪ, ಪ್ರಸಾದ ವಿನಿಯೋಗ ಜರುಗಲಿದೆ.
ಡಿ.೪ರಂದು ಸಂಜೆ ೬ ಗಂಟೆಯಿಂದ ಕಾಕಡಾರತಿ ಹಾಗು ಪಂಚಪದಿ ಭಜನೆ, ೭ ರಿಂದ ಪ್ರಾತಃಕಾಲ ಪೂಜೆ, ೮ರಿಂದ ಸಾಮೂಹಿಕ ಜಪ, ೯ ರಿಂರ ಉಪಹಾರ, ೧೦ರಿಂದ ಸಾಮೂಹಿಕ ಜಪ, ೧೧ ರಿಂದ ಶ್ರೀ ಹನುಮಾನ್ ಚಾಲೀಸ ಪಾಠ, ೧೧.೩೦ರಿಂದ ಆಶೀರ್ವಚನ ಹಾಗು ೧೨.೩೦ರಿಂದ ಮಾಹಾನೈವೇದ್ಯ, ಮಹಾಮಂಗಳಾರತಿ ಹಾಗು ಮಹಾಪ್ರಸಾದ ವಿನಿಯೋಗ ನಡೆಯಲಿದೆ.
ಭಕ್ತಾಧಿಗಳು ಹೆಚ್ಚಿನಯಲ್ಲಿ ಆಗಮಿಸಿ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ. ಹೆಚ್ಚಿನ ಮಾಹಿತಿಗೆ ಮೊ: ೮೬೬೦೬೦೦೮೨೭ ಅಥವಾ ೯೬೩೨೬೨೩೩೦೩ ಸಂಖ್ಯೆಗೆ ಕರೆ ಮಾಡಬಹುದಾಗಿದೆ.
No comments:
Post a Comment