ಭದ್ರಾವತಿ, ನ. ೨೭ : ಹಳೇನಗರದ ಶ್ರೀ ರಾಮೇಶ್ವರ ಶ್ರೀ ಸುಬ್ರಹ್ಮಣ್ಯಸ್ವಾಮಿ ದೇವಸ್ಥಾನದಲ್ಲಿ ನ. ೨೯ರ ಮಂಗಳವಾರ ಸ್ಕಂದ/ಸುಬ್ರಹ್ಮಣ್ಯ ಷಷ್ಠಿ ಏರ್ಪಡಿಸಲಾಗಿದೆ.
ಮಂಗಳವಾರ ಬೆಳಿಗ್ಗೆ ೭ ಗಂಟೆಗೆ ಶ್ರೀ ಸ್ವಾಮಿಗೆ ಪಂಚಾಮೃತ ಅಭಿಷೇಕ, ಮಹನ್ಯಾಸ ಪೂರ್ವಕ ರುದ್ರಾಭಿಷೇಕದ ನಂತರ ವಿಶೇಷ ಅಲಂಕಾರ, ಬೆಳಿಗ್ಗೆ ೯ ಗಂಟೆಗೆ ಶ್ರೀ ಸುಬ್ರಹ್ಮಣ್ಯ ಮೂಲಮಂತ್ರದಿಂದ ಹೋಮ ಜನ್ನಾಪುರ ವೇ.ಬ್ರ ಕೃಷ್ಣಮೂರ್ತಿ ಸೋಮಯಾಜಿ ಅರ್ಚಾರತ್ವದಲ್ಲಿ ನಡೆಯಲಿದೆ.
ರಾಜಬೀದಿ ಉತ್ಸವದ ನಂತರ ಪೂರ್ಣಾಹುತಿ, ಬ್ರಹ್ಮಚಾರಿಗಳಪೂಜೆ ನಂತರ ಮಹಾಮಂಗಳಾರತಿ ನಡೆಯಲಿದ್ದು, ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಲಾಗಿದೆ.
No comments:
Post a Comment