Saturday, November 5, 2022

ಹಿರಿಯ ಪತ್ರಕರ್ತರಾದ ಶಾಂತಿ ಕಣ್ಣಪ್ಪ ದಂಪತಿಗೆ ಸನ್ಮಾನ

ಭದ್ರಾವತಿ ಪೀಪಲ್ ಲಿಬರೇಷನ್ ಸಂಘ ಮತ್ತು ಪ್ರತಿಕ್ಷಣ ಚಾರಿಟಬಲ್ ಟ್ರಸ್ ವತಿಯಿಂದ ಹಿರಿಯ ಪತ್ರಕರ್ತರಾದ ಶಾಂತಿಕಣ್ಣಪ್ಪ ದಂಪತಿಯನ್ನು ಸನ್ಮಾನಿಸಿ ಗೌರವಿಸಲಾಯಿತು.
    ಭದ್ರಾವತಿ, ನ. ೫ : ಭದ್ರಾವತಿ ಪೀಪಲ್ ಲಿಬರೇಷನ್ ಸಂಘ ಮತ್ತು ಪ್ರತಿಕ್ಷಣ ಚಾರಿಟಬಲ್ ಟ್ರಸ್ ವತಿಯಿಂದ ಹಿರಿಯ ಪತ್ರಕರ್ತರಾದ ಶಾಂತಿಕಣ್ಣಪ್ಪ ದಂಪತಿಯನ್ನು ಸನ್ಮಾನಿಸಿ ಗೌರವಿಸಲಾಯಿತು.
ನ್ಯೂಟೌನ್ ವಿಐಎಸ್‌ಎಲ್ ಆಸ್ಪತ್ರೆ ಸಮೀಪದಲ್ಲಿರುವ ಟ್ರಸ್ಟ್ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ಲಕ್ಷ್ಮೀ ಪೂಜೆ ಹಾಗು ಬೆಟ್ಟದ ನೆಲ್ಲಿಕಾಯಿ ಸಸಿ ವಿತರಣೆ ಕಾರ್ಯಕ್ರಮದಲ್ಲಿ ಶಾಂತಿಕಣ್ಣಪ್ಪ ಅವರನ್ನು ಸನ್ಮಾನಿಸಲಾಯಿತು.
    ಭದ್ರಾವತಿ ಪೀಪಲ್ ಲಿಬರೇಷನ್ ಸಂಘದ ಅಧ್ಯಕ್ಷ ಜಗದೀಶ್, ಮುರಳಿಕೃಷ್ಣ, ಗ್ರಾಮ ಪಂಚಾಯಿತಿ ಸದಸ್ಯ ಶಿವರಾಮ್, ಸಾಮಾಜಿಕ ಹೋರಾಟಗಾರ ಶಿವಕುಮಾರ್, ಪತ್ರಕರ್ತರಾದ ಬದರಿನಾರಾಯಣ ಶ್ರೇಷ್ಠಿ, ಫಿಲೋಮಿನಾ, ಅನಂತಕುಮಾರ್, ಪ್ರಮುಖರಾದ ಜಯಲಕ್ಷ್ಮೀ, ಎಚ್.ಆರ್ ಮಮತ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.  

No comments:

Post a Comment