Tuesday, November 15, 2022

ಕನಕ ಜಯಂತಿ ಆಚರಣೆ ಮಾಡದ ಗ್ರಾಮ ಪಂಚಾಯಿತಿ ವಿರುದ್ಧ ಪ್ರತಿಭಟನೆ

ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಮನವಿ

ಭದ್ರಾವತಿ ತಾಲೂಕಿನ ಎರೇಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ದಾಸಶ್ರೇಷ್ಠ ಕನಕದಾಸರ ಜಯಂತಿ ಆಚರಣೆ ಮಾಡದೆ ನಿರ್ಲಕ್ಷ್ಯತನದಿಂದ ವರ್ತಿಸುವ ಮೂಲಕ ಅವಮಾನ ಮಾಡಲಾಗಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪಂಚಾಯಿತಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
    ಭದ್ರಾವತಿ, ನ. ೧೫: ತಾಲೂಕಿನ ಎರೇಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ದಾಸಶ್ರೇಷ್ಠ ಕನಕದಾಸರ ಜಯಂತಿ ಆಚರಣೆ ಮಾಡದೆ ನಿರ್ಲಕ್ಷ್ಯತನದಿಂದ ವರ್ತಿಸುವ ಮೂಲಕ ಅವಮಾನ ಮಾಡಲಾಗಿದ್ದು, ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಪಂಚಾಯಿತಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
    ಸರ್ಕಾರದ ಆದೇಶದಂತೆ ಎಲ್ಲಾ ಸರ್ಕಾರಿ ಕಛೇರಿಗಳಲ್ಲೂ ಕಡ್ಡಾಯವಾಗಿ ದಾಸಶ್ರೇಷ್ಠ ಕನಕದಾಸರ ಜಯಂತಿ ಆಚರಿಸಬೇಕು. ಆದರೆ ಈ ಗ್ರಾಮ ಪಂಚಾಯಿತಿಯಲ್ಲಿ ಕನಕ ಜಯಂತಿ ಆಚರಣೆ ಮಾಡದೆ ನಿರ್ಲಕ್ಷ್ಯತನದಿಂದ ವರ್ತಿಸಲಾಗಿದೆ. ಗ್ರಾಮಸ್ಥರು ಕಛೇರಿಯಲ್ಲಿ ಕನಕ ಜಯಂತಿ ಆಚರಣೆ ಮಾಡುತ್ತಾರೆಂದು ಬೆಳಿಗ್ಗೆಯಿಂದ ಸಂಜೆವರೆಗೂ ಎದುರು ನೋಡುತ್ತಿದ್ದರು. ಆದರೆ ಅಂದು ಕಛೇರಿಗೆ ಯಾರು ಸಹ ಬಾರದೆ, ಕಛೇರಿ ಬೀಗವನ್ನು ಸಹ ತೆಗೆಯದೆ ಕನಕ ಜಯಂತಿ ಆಚರಣೆ ಮಾಡದೆ ಅವಮಾನಗೊಳಿಸಲಾಗಿದೆ ಎಂದು ಪ್ರತಿಭಟನೆಯಲ್ಲಿ ದೂರಲಾಯಿತು.


    ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಜಿಲ್ಲಾ ಪಂಚಾಯಿತಿ ಅಭಿವೃದ್ಧಿ ಶಾಖೆ ಉಪ ಕಾರ್ಯದರ್ಶಿ ಕೆ. ಜಯಲಕ್ಷ್ಮೀ ಮತ್ತು ತಾಲೂಕು ಪಂಚಾಯಿತಿ ಸಹಾಯಕ ನಿರ್ದೇಶಕ ಎಸ್. ಉಪೇಂದ್ರರವರಿಗೆ ಮನವಿ ಸಲ್ಲಿಸಿ ತಕ್ಷಣ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಲಾಯಿತು.
    ಪ್ರತಿಭಟನೆಯಲ್ಲಿ ಗ್ರಾಮಸ್ಥರಾದ ಪ್ರಸನ್ನಕುಮಾರ್, ಲಿಂಗೇಶ್, ಚಂದ್ರಶೇಖರ್, ವಾಸುದೇವ, ಮಂಜುನಾಥ್, ಧನಂಜಯ, ಉಮೇಶ್, ಚಿಕ್ಕಣ್ಣ ರಾಜೇಶ್ ಹಾಗು ಮಹಿಳೆಯರು ಮತ್ತು ತಾಲೂಕು ಕುರುಬರ ಸಂಘದ ಅಧ್ಯಕ್ಷ ಬಿ.ಎಂ ಸಂತೋಷ್, ಉಪಾಧ್ಯಕ್ಷ ಬಿ.ಎಸ್ ಮಂಜುನಾಥ್, ಖಜಾಂಚಿ ಬಿ.ಎಚ್ ವಸಂತ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

No comments:

Post a Comment