Thursday, November 17, 2022

ವರ್ತಕರ ಸಂಘದ ಅಧ್ಯಕ್ಷರಾಗಿ ಸಿ.ಎನ್ ಗಿರೀಶ್

ಸಿ.ಎನ್ ಗಿರೀಶ್

ಭದ್ರಾವತಿ ನ. ೧೭ : ನಗರದ ವರ್ತಕರ ಸಂಘದ ನೂತನ ಅಧ್ಯಕ್ಷರಾಗಿ ಬಿ.ಎಚ್ ರಸ್ತೆ ಹಾಲಪ್ಪ ವೃತ್ತದ ವಾಣಿ ಸ್ಟೋರ‍್ಸ್‌ನ ಸಿ.ಎನ್ ಗಿರೀಶ್ ಆಯ್ಕೆಯಾಗಿದ್ದಾರೆ.
ನಗರದಲ್ಲಿ ವರ್ತಕರ ಹಿತರಕ್ಷಣೆಗೆ ಬದ್ಧವಾಗಿ ಸಂಘವನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದು, ಇದೀಗ ನೂತನ ಪದಾಧಿಕಾರಿಗಳನ್ನು ಆಯ್ಕೆಮಾಡಲಾಗಿದೆ. ಗೌರವಾಧ್ಯಕ್ಷರಾಗಿ ಗುರುರಾಜಾಚಾರ್, ಉಪಾಧ್ಯಕ್ಷರಾಗಿ ಭವರ್ ಲಾಲ್ ಜೈನ್, ಕಾರ್ಯದರ್ಶಿಯಾಗಿ ಡಿ.ಎನ್ ಅಶೋಕ್, ಸಹಕಾರ್ಯದರ್ಶಿಗಳಾಗಿ ತಿಪ್ಪೇಶ್ ಮತ್ತು ಶ್ರೀವತ್ಸ, ಖಜಾಂಚಿಯಾಗಿ ಭರತ್ ಜೈನ್ ಹಾಗು ಕಾರ್ಯಕಾರಿ ಸಮಿತಿ ಸದಸ್ಯರಾಗಿ ವಾದಿರಾಜ್ ಅಡಿಗ, ನಾರಾಯಣ ಮೂರ್ತಿ, ಮಿಥೇಶ್ ಜೈನ್, ಕೆ.ವಿ ಹರೀಶ್ ಬಾಬು, ಎಸ್.ಎನ್ ಶ್ರೀನಿವಾಸ್, ಮಹಮದ್ ಶಿರಾಜ್, ಪ್ರಕಾಶ್, ಬಿ.ಅರ್ ವೆಂಕಟೇಶ ಮೂರ್ತಿ ಮತ್ತು ವಿಶ್ವನಾಥ್ ಅಯ್ಕೆಯಾದರು.


ಡಿ.ಎನ್ ಅಶೋಕ್

No comments:

Post a Comment