ಜಹೀರ್
ಅಸ್ಲಾಂ ಅಲಿಯಾಸ್ ಅಸ್ಲಿ
ಅಶೋಕ್
ಮಂಜುನಾಥ್
ಗೌತಮ್ ಅಲಿಯಾಸ್ ಅಪ್ಪು
ಹರೀಶ್
ಭದ್ರಾವತಿ, ನ. ೧೬: ಇತ್ತೀಚೆಗೆ ನಗರದ ತರೀಕೆರೆ ರಸ್ತೆ ಮಹಾತ್ಮಗಾಂಧಿ ವೃತ್ತದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಸಮೀಪ ನಡೆದಿರುವ ಮಾರಾಮಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು ೩ ದೂರುಗಳು ದಾಖಲಾಗಿದ್ದು, ಒಟ್ಟು ೬ ಮಂದಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಜಹೀರ್, ಅಸ್ಲಂ ಹಾಗೂ ಹರೀಶ್, ಗೌತಮ್ ಅಲಿಯಾಸ್ ಅಪ್ಪುರವರ ನಡುವೆ ನಡೆದಿರುವ ಮಾರಾಮಾರಿ ಪ್ರಕರಣದಲ್ಲಿ ಜಹೀರ್ ಮತ್ತು ಹರೀಶ್ ಹೊಸಮನೆ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕವಾಗಿ ದೂರು ದಾಖಲಿಸಿದ್ದಾರೆ.
ಆಸ್ಪತ್ರೆಗೆ ದಾಖಲಾಗಿದ್ದ ಜಹೀರ್ನನ್ನು ನೋಡಲು ಹೋದಾಗ ಚಾಕುವಿನಿಂದ ಚುಚ್ಚಿ ಹಲ್ಲೆ ನಡೆಸಲಾಗಿದೆ ಎಂದು ರಿಜ್ವಾನ್ ಹಳೇನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಜಹೀರ್ ನೀಡಿದ ದೂರಿನ ಆಧಾರದ ಮೇಲೆ ನೆಹರೂ ನಗರದ ನಿವಾಸಿಗಳಾದ ಹರೀಶ್(೨೨) ಮತ್ತು ಗೌತಮ್ ಅಲಿಯಾಸ್ ಅಪ್ಪು(೨೨)ರನ್ನು ಹಾಗು ಹರೀಶ್ ನೀಡಿದ ದೂರಿನ ಆಧಾರದ ಮೇಲೆ ಸಿದ್ದಾಪುರ ಹೊಸೂರು ಗ್ರಾಮದ ಜಹೀರ್ (೨೭) ಮತ್ತು ಎಕಿನ್ಸಾ ಕಾಲೋನಿಯ ಅಸ್ಲಾಂ ಅಲಿಯಾಸ್ ಅಸ್ಲಿ(೨೯)ರನ್ನು ಮತ್ತು ರಿಜ್ವಾನ್ ನೀಡಿದ ದೂರಿನ ಆಧಾರದ ಮೇಲೆ ಹೊಸಮನೆ ಮಂಜುನಾಥ್(೨೪) ಮತ್ತು ಅಶೋಕ್(೨೨)ರನ್ನು ಬಂಧಿಸಲಾಗಿದೆ. ಒಟ್ಟು ೬ ಮಂದಿಯನ್ನು ಪೊಲೀಸರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
ಈ ಮಾರಾಮಾರಿ ಪ್ರಕರಣ ಆರಂಭದಲ್ಲಿ ಕೋಮು ಗಲಭೆಯಾಗಿ ಬಿಂಬಿಸುವ ಯತ್ನ ನಡೆದಿದ್ದು, ಈ ಹಿನ್ನಲೆಯಲ್ಲಿ ವ್ಯಾಪಕ ಪ್ರಚಾರ ಪಡೆದುಕೊಂಡಿತ್ತು. ಆದರೆ ಪೊಲೀಸರ ಸಮಯ ಪ್ರಜ್ಞೆ ಹಾಗು ಕಾರ್ಯಾಚರಣೆಯಿಂದಾಗಿ ಪ್ರಕರಣದ ಸತ್ಯಾಸತ್ಯತೆ ತಕ್ಷಣ ಬಯಲಾಯಿತು.
No comments:
Post a Comment