Thursday, November 10, 2022

ಕನಕ ಜಯಂತಿ : ಹಲವು ಕಾರ್ಯಕ್ರಮ

ಯಶಸ್ವಿಗೊಳಿಸಲು ವೈ. ನಟರಾಜ್ ಮನವಿ

ವೈ. ನಟರಾಜ್
    ಭದ್ರಾವತಿ, ನ. ೧೧: ಈ ಬಾರಿ ದಾಸ ಶ್ರೇಷ್ಠ ಕನಕದಾಸರ ಜಯಂತಿ ಕಾರ್ಯಕ್ರಮ ವಿಜೃಂಭಣೆಯಿಂದ ಆಚರಿಸಲಾಗುತ್ತಿದ್ದು, ಅಲ್ಲದೆ ಹಲವಾರು ಸೇವಾ ಕಾರ್ಯಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಶ್ರೀ ಕನಕ ಪತ್ತಿನ ಸಹಕಾರ ಸಂಘ ನಿಯಮಿತ ನಿರ್ದೇಶಕ ವೈ. ನಟರಾಜ್ ತಿಳಿಸಿದ್ದಾರೆ.
    ಅನ್ನಸಂತರ್ಪಣೆ, ಸಿಹಿ ಹಾಗು ಹಣ್ಣು ವಿತರಣೆ ಸೇರಿದಂತೆ ಇನ್ನಿತರ ಸೇವಾ ಕಾರ್ಯಗಳು ಜರುಗಲಿವೆ. ನಗರದ ವಿವಿಧೆಡೆ ವಿವಿಧ ಸಂಘ-ಸಂಸ್ಥೆಗಳಿಂದ ಹಲವಾರು ಕಾರ್ಯಕ್ರಮಗಳು ಜರುಗಲಿವೆ. ಅಲ್ಲದೆ ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಕನಕದಾಸರ ಭಾವಚಿತ್ರದೊಂದಿಗೆ ಭವ್ಯ ಮೆರವಣಿಗೆ ನಡೆಯಲಿದ್ದು, ಎಲ್ಲಾ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸುವಂತೆ ಕೋರಿದ್ದಾರೆ.



No comments:

Post a Comment