Saturday, November 19, 2022

ಯೋಗ ಆರೋಗ್ಯಕ್ಕೆ ಪೂರಕ ಪ್ರತಿಯೊಬ್ಬರು ರೂಡಿಸಿಕೊಳ್ಳಿ : ಆರ್. ರಾಮಮೂರ್ತಿ

ಕರ್ನಾಟಕ ಯೋಗ ಸಂಸ್ಥೆ ಅಧ್ಯಕ್ಷ್ಯ ಆರ್. ರಾಮಮೂರ್ತಿ ಭದ್ರಾವತಿ ನ್ಯೂಟೌನ್  ಮಹಾತ್ಮ ಗಾಂಧಿ ಉದ್ಯಾನವನ ಮುಂಭಾಗದಲ್ಲಿರುವ ಶ್ರೀರಾಮ ಸಮುದಾಯ ಭವನದಲ್ಲಿ ಕರ್ನಾಟಕ ಯೋಗ ಸಂಸ್ಥೆ ಹಾಗೂ ಶ್ರೀ ಅನ್ನಪೂರ್ಣೇಶ್ವರಿ ವಿವೇಕಾನಂದ ಯೋಗ ಅಸೋಸಿಯೇಷನ್ ವತಿಯಿಂದ ಶನಿವಾರ ಹಮ್ಮಿಕೊಳ್ಳಲಾಗಿದ್ದ ೪೧ನೇ ಕರ್ನಾಟಕ ರಾಜ್ಯ ಯೋಗಾಸನ ಚಾಂಪಿಯನ್ ಶಿಪ್ ಹಾಗೂ ೨೮ನೇ ಕರ್ನಾಟಕ ರಾಜ್ಯ ವಿಜಯೇತರ ಯೋಗಾಸನ ಸ್ಪರ್ಧೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.  
    ಭದ್ರಾವತಿ, ನ. ೧೯: ಎಲ್ಲರಿಗೂ ಆರೋಗ್ಯ ಮುಖ್ಯವಾಗಿದ್ದು, ಇದಕ್ಕೆ ಪೂರಕವಾಗಿರುವ ಯೋಗ ರೂಡಿಸಿಕೊಳ್ಳಬೇಕೆಂದು ಕರ್ನಾಟಕ ಯೋಗ ಸಂಸ್ಥೆ ಅಧ್ಯಕ್ಷ್ಯ ಆರ್. ರಾಮಮೂರ್ತಿ ಹೇಳಿದರು.
    ಅವರು ಶನಿವಾರ ನಗರದ ನ್ಯೂಟೌನ್  ಮಹಾತ್ಮ ಗಾಂಧಿ ಉದ್ಯಾನವನ ಮುಂಭಾಗದಲ್ಲಿರುವ ಶ್ರೀರಾಮ ಸಮುದಾಯ ಭವನದಲ್ಲಿ ಕರ್ನಾಟಕ ಯೋಗ ಸಂಸ್ಥೆ ಹಾಗೂ ಶ್ರೀ ಅನ್ನಪೂರ್ಣೇಶ್ವರಿ ವಿವೇಕಾನಂದ ಯೋಗ ಅಸೋಸಿಯೇಷನ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ೪೧ನೇ ಕರ್ನಾಟಕ ರಾಜ್ಯ ಯೋಗಾಸನ ಚಾಂಪಿಯನ್ ಶಿಪ್ ಹಾಗೂ ೨೮ನೇ ಕರ್ನಾಟಕ ರಾಜ್ಯ ವಿಜಯೇತರ ಯೋಗಾಸನ ಸ್ಪರ್ಧೆ ಅಧ್ಯಕ್ಷತೆ ವಹಿಸಿ ಮಾತನಾಡಿದರು.  
    ಮನುಷ್ಯನಿಗೆ ಅಧಿಕಾರ, ಸಂಪತ್ತು ಎಲ್ಲಕ್ಕಿಂತ ಮುಖ್ಯವಾಗಿ ಆರೋಗ್ಯ ಬಹಳ ಮುಖ್ಯವಾಗಿದೆ. ಹಿನ್ನೆಲೆಯಲ್ಲಿ ಆರೋಗ್ಯಕ್ಕೆ ಪೂರಕವಾಗಿ ಯೋಗ ರೂಡಿಸಿಕೊಂಡಾಗ ಮಾತ್ರ ಯಶಸ್ಸು ಕಾಣಲು ಸಾಧ್ಯ ಎಂದರು.
    ಕರ್ನಾಟಕ ಯೋಗ ಸಂಸ್ಥೆ ವತಿಯಿಂದ ೩೦ ವರ್ಷಗಳ ಬಳಿಕ ಎರಡನೇ ಬಾರಿಗೆ ಭದ್ರಾವತಿಯಲ್ಲಿ ರಾಜ್ಯಮಟ್ಟದ ಸ್ಪರ್ಧೆ ಆಯೋಜಿಸಲಾಗಿದೆ. ಈ ಸ್ಪರ್ಧೆಯಲ್ಲಿ ವಿಜೇತರಾದ ಮೊದಲ ಮೂರು ಪಟುಗಳು  ಡಿಸೆಂಬರ್ ತಿಂಗಳಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಸ್ಪರ್ಧೆಯಲ್ಲಿ ಭಾಗವಹಿಸಲಿದ್ದಾರೆ ಎಂದರು.
    ಸ್ತ್ರೀ ರೋಗ ತಜ್ಞೆ ಡಾ. ವೀಣಾ ಭಟ್ ಮಾತನಾಡಿ, ಯೋಗ ಕೇವಲ ಪ್ರದರ್ಶನಕ್ಕೆ ಮೀಸಲಾಗಿರದೆ ನಿದರ್ಶನವಾಗಬೇಕು. ಯೋಗ ಬದುಕಿನ ಅವಿಭಾಗ್ಯ ಅಂಗವಾಗಬೇಕೆಂದರು.
    ನಗರಸಭೆ ಮಾಜಿ ಅಧ್ಯಕ್ಷ ಬಿ.ಕೆ ಮೋಹನ್ ಉದ್ಘಾಟಿಸಿದರು. ಕರ್ನಾಟಕ ಯೋಗ ಸಂಸ್ಥೆ ಉಪಾಧ್ಯಕ್ಷ ರುದ್ರಾರಾಧ್ಯ, ಕಾರ್ಯದರ್ಶಿ ಪುಟ್ಟೇಗೌಡ, ನಗರಸಭೆ ಅಧ್ಯಕ್ಷೆ ಅನುಸುಧಾ ಮೋಹನ್ ಪಳನಿ, ಉಪಾಧ್ಯಕ್ಷ ಚನ್ನಪ್ಪ, ಸ್ಥಾಯಿ ಸಮಿತಿ ಅಧ್ಯಕ್ಷ ಕೆ. ಸುದೀಪ್‌ಕುಮಾರ್, ಸದಸ್ಯರಾದ ಶೃತಿ ವಸಂತ್, ಲತಾ ಚಂದ್ರಶೇಖರ್, ಕಾಂತರಾಜ್, ಶ್ರೀ ಅನ್ನಪೂರ್ಣೇಶ್ವರಿ ವಿವೇಕಾನಂದ ಯೋಗ ಅಸೋಸಿಯೇಷನ್ ಅಧ್ಯಕ್ಷ ಕೆ.ಎಚ್ ಪಾಲಾಕ್ಷಪ್ಪ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು. ಅಸೋಸಿಯೇಷನ್ ಕಾರ್ಯದರ್ಶಿ ಕೆ.ಜೆ ತಮ್ಮಣ್ಣಗೌಡ ನಿರೂಪಿಸಿದರು.

No comments:

Post a Comment