ಭದ್ರಾವತಿ, ನ. 20 : ರಾಷ್ಟ್ರೀಯ ಮಾನವ ಹಕ್ಕುಗಳು ಮತ್ತು ಭ್ರಷ್ಟಾಚಾರ ನಿಯಂತ್ರಣ ಮಂಡಳಿ ತಾಲೂಕು ಶಾಖೆ ನೂತನ ಪದಾಧಿಕಾರಿಗಳ ಪದಗ್ರಹಣ ಮತ್ತು ಕನ್ನಡ ರಾಜ್ಯೋತ್ಸವ ಭಾನುವಾರ ನ್ಯೂಟೌನ್ ಲಯನ್ಸ್ ಕ್ಲಬ್ ನಲ್ಲಿ ಭಾನುವಾರ ನಡೆಯಿತು.
ನೂತನ ಅಧ್ಯಕ್ಷರಾಗಿ ಐ.ವಿ ಸಂತೋಷ್ ಕುಮಾರ್ ಸೇರಿದಂತೆ ಇನ್ನಿತರರು ಪದಗ್ರಹಣ ಸ್ವೀಕರಿಸಿದರು. ಇದಕ್ಕೂ ಮೊದಲು ಹಳೆನಗರ ಕನಕ ಮಂಟಪ ಮೈದಾನದಿಂದ ಶಿವಮೊಗ್ಗದ ವಿಕಲಚೇತನ, ಕನ್ನಡಾಭಿಮಾನಿ ಶಿವು ರಾಮಪ್ಪ ನೇತೃತ್ವದಲ್ಲಿ ಆಟೋ ಮತ್ತು ಬೈಕ್ ಜಾಥ ನಡೆಸಲಾಯಿತು.
ಸಂಸ್ಥಾಪಕ ಅಧ್ಯಕ್ಷ ಡಿ.ಜೆ ಪ್ರಭು ಚಾಲನೆ ನೀಡಿದರು. ರಾಜ್ಯ ಉಪಾಧ್ಯಕ್ಷ ಮೋಸಸ್ ರೋಸಯ್ಯ ಸೇರಿದಂತೆ ಪ್ರಮುಖರು, ಪದಾಧಿಕಾರಿಗಳು, ಕಾರ್ಯಕರ್ತರು, ಕನ್ನಡ ಅಭಿಮಾನಿಗಳು ಪಾಲ್ಗೊಂಡಿದ್ದರು.
No comments:
Post a Comment